tamanvi
ಕರಾವಳಿಸ್ಥಳೀಯ

ಸುಳ್ಯ: ನದಿಗೆ ಹಾರಿ ಪರಾರಿಯಾಗಲೆತ್ನಿಸಿದ ಕೈದಿಯ ಬಂಧನ!!

GL
ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು

ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.

ಸುಳ್ಯ ಮಾರ್ಗವಾಗಿ ಪೊಲೀಸರು ತೆರಳುತ್ತಿದ್ದ ಸಂದರ್ಭದಲ್ಲಿ ಓಡಬಾಯಿ ಸಮೀಪ ಚಹಾ ಕುಡಿಯಲು ನಿಲ್ಲಿಸಿದ್ದು, ಈ ವೇಳೆ  ಕೈದಿ ಕೂಡ ಇವರೊಂದಿಗೆ ಚಹಾ, ತಿಂಡಿ ಸವಿದು ಕೈತೊಳೆಯಲು ಹೋದ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಜೋರಾಗಿ ಕಿರುಚಿಕೊಂಡಾಗ ಈತ ಹೋಟೆಲ್ ನ ಹಿಂದೆ ಇದ್ದ ಪಯಸ್ವಿನಿ ನದಿಗೆ ಹಾರಿ ದೊಡೇರಿ ಕಡೆಗೆ ಓಡಿದ್ದಾನೆ.

ಬಟ್ಟೆಯಲ್ಲಿ ಕೆಸರು ನೀರು ಆಗಿರುವುದನ್ನು ಕಂಡು ಹತ್ತಿರದ ಮನೆಯವರಿಗೆ ಆತನ ಬಗ್ಗೆ ಸಂಶಯದಿಂದ ಆತನನ್ನು ಆ ಊರಿನ ಯುವಕರು ವಿಚಾರಿಸಿದಾಗ  ಪೊಲೀಸರ ಕೈಯಿಂದ ತಪ್ಪಿಸಿಕೊಂಡ ವಿಚಾರ ಬೆಳಕಿಗೆ ಬಂದಿದ್ದು, ಇದೇ ವೇಳೆ ಮೈಸೂರು ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಸಫಲರಾಗಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮಂಗಳೂರಿನಲ್ಲಿ ರಾಜ್ಯದ ಮೊದಲ ಬೋಟ್ ಆಂಬ್ಯುಲೆನ್ಸ್ | ಸರ್ಕಾರದ ನೆರವಿಗೆ ಕಾಯದೇ, ಮೀನುಗಾರರೇ ರೂಪಿಸಿದ ಯೋಜನೆ!

ಮಂಗಳೂರು: ಸಮುದ್ರದಲ್ಲಿನ ತುರ್ತು ಅವಘಡಗಳು ಮತ್ತು ಆರೋಗ್ಯ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು…

1 of 157