ಕರಾವಳಿಸ್ಥಳೀಯ

ಸುಳ್ಯ: ನದಿಗೆ ಹಾರಿ ಪರಾರಿಯಾಗಲೆತ್ನಿಸಿದ ಕೈದಿಯ ಬಂಧನ!!

ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಬ್ಯಾಂಕ್ ಖಾತೆ ಹ್ಯಾಕ್ ಮತ್ತು ಕೋಟ್ಯಾಂತರ ರೂ. ವಂಚನೆ ಮಾಡಿರುವ ಆರೋಪ ಹೊತ್ತ ಕೈದಿಯನ್ನು

maithri

ಮೈಸೂರು ಕ್ರೈಂ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದರು.

ಸುಳ್ಯ ಮಾರ್ಗವಾಗಿ ಪೊಲೀಸರು ತೆರಳುತ್ತಿದ್ದ ಸಂದರ್ಭದಲ್ಲಿ ಓಡಬಾಯಿ ಸಮೀಪ ಚಹಾ ಕುಡಿಯಲು ನಿಲ್ಲಿಸಿದ್ದು, ಈ ವೇಳೆ  ಕೈದಿ ಕೂಡ ಇವರೊಂದಿಗೆ ಚಹಾ, ತಿಂಡಿ ಸವಿದು ಕೈತೊಳೆಯಲು ಹೋದ ಆತ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಇದನ್ನು ನೋಡಿದ ಸ್ಥಳೀಯರು ಜೋರಾಗಿ ಕಿರುಚಿಕೊಂಡಾಗ ಈತ ಹೋಟೆಲ್ ನ ಹಿಂದೆ ಇದ್ದ ಪಯಸ್ವಿನಿ ನದಿಗೆ ಹಾರಿ ದೊಡೇರಿ ಕಡೆಗೆ ಓಡಿದ್ದಾನೆ.

ಬಟ್ಟೆಯಲ್ಲಿ ಕೆಸರು ನೀರು ಆಗಿರುವುದನ್ನು ಕಂಡು ಹತ್ತಿರದ ಮನೆಯವರಿಗೆ ಆತನ ಬಗ್ಗೆ ಸಂಶಯದಿಂದ ಆತನನ್ನು ಆ ಊರಿನ ಯುವಕರು ವಿಚಾರಿಸಿದಾಗ  ಪೊಲೀಸರ ಕೈಯಿಂದ ತಪ್ಪಿಸಿಕೊಂಡ ವಿಚಾರ ಬೆಳಕಿಗೆ ಬಂದಿದ್ದು, ಇದೇ ವೇಳೆ ಮೈಸೂರು ಪೊಲೀಸರು ಸ್ಥಳಕ್ಕೆ ಬಂದು ಆತನನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಸಫಲರಾಗಿದ್ದಾರೆ


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 169