tamanvi
ಟ್ರೆಂಡಿಂಗ್ ನ್ಯೂಸ್ದೇಶಸಿನೇಮಾಸ್ಥಳೀಯ

ಮತ್ತೆ ಬರಲಿದೆ ಮುಕೇಶ್ ಖನ್ನಾ ಅಭಿನಯದ ‘ಶಕ್ತಿಮಾನ್’ ! ಶಕ್ತಿ ಕಳೆದುಕೊಂಡ ಮ್ಯಾನ್ ಎಂದು ಕುಟುಕಿದ ನೆಟ್ಟಿಗರು!!

D_shiva_bhat
90ರ ದಶಕದಲ್ಲಿ ಈ ಶೋ ಸಾಕಷ್ಟು ಮನ್ನಣೆ ಪಡೆದಿತ್ತು. ಈಗ ಮುಕೇಶ್ ಅವರಿಗೆ 66 ವರ್ಷ. ಅವರು ಈಗ ಮತ್ತೆ ಶಕ್ತಿಮಾನ್ ಬಟ್ಟೆ ತೊಟ್ಟಿದ್ದಾರೆ. ಈ ಶೋನ ಮತ್ತೆ ತರೋದಾಗಿ ಮುಕೇಶ್ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೀಕೆ ವ್ಯಕ್ತವಾಗಿದೆ. ‘ಆ ಶೋಗೆ ಇರುವ ಮರ್ಯಾದೆಯನ್ನು ಹಾಳು ಮಾಡಬೇಡಿ’ ಎಂದು ಅನೇಕರು ಕೋರಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

90ರ ದಶಕದಲ್ಲಿ ಈ ಶೋ ಸಾಕಷ್ಟು ಮನ್ನಣೆ ಪಡೆದಿತ್ತು. ಈಗ ಮುಕೇಶ್ ಅವರಿಗೆ 66 ವರ್ಷ. ಅವರು ಈಗ ಮತ್ತೆ ಶಕ್ತಿಮಾನ್ ಬಟ್ಟೆ ತೊಟ್ಟಿದ್ದಾರೆ. ಈ ಶೋನ ಮತ್ತೆ ತರೋದಾಗಿ ಮುಕೇಶ್ ಹೇಳಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಟೀಕೆ ವ್ಯಕ್ತವಾಗಿದೆ. ‘ಆ ಶೋಗೆ ಇರುವ ಮರ್ಯಾದೆಯನ್ನು ಹಾಳು ಮಾಡಬೇಡಿ’ ಎಂದು ಅನೇಕರು ಕೋರಿದ್ದಾರೆ.

maithri

ಎಎನ್​ಐ ಜೊತೆ ಮಾತನಾಡಿರುವ ಮುಕೇಶ್ ಖನ್ನಾ, ‘ಈ ಬಟ್ಟೆ ನನ್ನಲ್ಲೇ ಇದೆ. ನನ್ನಲ್ಲೇ ಬೆರೆತು ಹೋಗಿದೆ. ಶಕ್ತಿಮಾನ್​ನಲ್ಲಿ ನಾನು ಉತ್ತಮವಾಗಿ ನಟಿಸಿದ್ದೆ. ಶೂಟಿಂಗ್ ಮಾಡುವಾಗ ಕ್ಯಾಮೆರಾ ಇದೆ ಎಂಬುದನ್ನೇ ಮರೆತಿದ್ದೆ. 1997ರಿಂದ 20005ರವರೆಗೆ ಶೋ ನಡೆದಿತ್ತು. ಈ ಪಾತ್ರ ಈಗಿನ ಜನರೇಷನ್ ತಲುಪಬೇಕು’ ಎಂದಿದ್ದಾರೆ. 2027ರ ವೇಳೆಗೆ ಈ ಶೋ ಪ್ರಸಾರ ಕಾಣುವ ಭರವಸೆಯನ್ನು ಅವರು ಹೊರಹಾಕಿದ್ದಾರೆ.

ಶಕ್ತಿಮಾನ್ ಪಾತ್ರ ಮಾಡಬೇಕು ಎಂದರೆ ಸಾಕಷ್ಟು ಎನರ್ಜಿ ಬೇಕು. ಆದರೆ, ಮುಕೇಶ್ ಅವರಿಗೆ ಈಗ ವಯಸ್ಸಾಗಿದೆ. ಅವರಲ್ಲಿ ಮೊದಲಿನ ಎನರ್ಜಿ ಇಲ್ಲ. ಹೀಗಾಗಿ, ಅವರು ಶಕ್ತಿಮಾನ್ ಪಾತ್ರ ಮಾಡಿದರೆ ಮೊದಲಿನಷ್ಟು ಶೋ ಉತ್ತಮವಾಗಿ ಮೂಡಿ ಬರುವುದಿಲ್ಲ ಎಂಬುದು ಅನೇಕರ ನಂಬಿಕೆ. ‘ಶಕ್ತಿಮಾನ್ ಈಗ ಫೈಟ್ ಮಾಡಿದರೆ ಆಸ್ಪತ್ರೆ ಸೇರಬೇಕು’ ಎಂದು ಕೆಲವರು ಹೇಳಿದ್ದಾರೆ. ‘ಮುಕೇಶ್ ಅವರು ಭೂತಕಾಲದಲ್ಲೇ ಸ್ಟಕ್ ಆಗಿದ್ದಾರೆ’ ಎಂದು ಕೆಲವರು ಹೇಳಿದ್ದಾರೆ.

‘ಶಕ್ತಿಮಾನ್’ ಹೆಸರಲ್ಲಿ ಸಿನಿಮಾ ಬರುತ್ತಿದೆ ಎನ್ನುವ ಸುದ್ದಿ ಇದೆ. ಇದನ್ನು ರಣವೀರ್ ಸಿಂಗ್ ಮಾಡುತ್ತಾರೆ ಎನ್ನಲಾಗಿದೆ. ಈ ಬಗ್ಗೆ ಮುಕೇಶ್​ಗೆ ಅಸಮಾಧಾನ ಇದೆ. ‘ಬೆತ್ತಲೆ ಆಗಿ ಕಾಣಿಸಿಕೊಂಡವರಿಗೆ ಶಕ್ತಿಮಾನ್ ಪಾತ್ರ ಮಾಡುವ ಅಧಿಕಾರ ಇಲ್ಲ’ ಎಂದು ಮುಕೇಶ್ ಹೇಳಿದ್ದರು. ರಣವೀರ್ ಸಿಂಗ್ ಈ ಮೊದಲು ಬೆತ್ತಲೆ ಫೋಟೋಶೂಟ್ ಮಾಡಿ ವಿವಾದ ಸೃಷ್ಟಿ ಮಾಡಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಸುಳ್ಯದಲ್ಲಿ ಇಂದು ‘ದಿ ರಿದಾನ್ ಮಂದಿ’ ಶುಭಾರಂಭ | ಅರೇಬಿಯನ್ ಸಾಂಪ್ರದಾಯಿಕ ರುಚಿಯ ಸವಿಗೆ ಭವ್ಯ ಚಾಲನೆ

ಕರಾವಳಿ ಭಾಗದ ಆಹಾರಪ್ರಿಯರ ಬಹು ನಿರೀಕ್ಷಿತ ‘ದಿ ರಿದಾನ್ ಮಂದಿ’ ಫ್ಯಾಮಿಲಿ ರೆಸ್ಟೋರೆಂಟ್ ಇಂದು…

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ನಟ ಅಮಿರ್ ಖಾನ್’ಗೆ ಬೆದರಿಕೆ ಹಾಕಿದ ಲಾರೆನ್ಸ್ ಬಿಷ್ಣೋಯ್ ತಂಡ!! ಲವ್ ಜಿಹಾದ್ ಪ್ರೋತ್ಸಾಹಕ್ಕೆ ತಕ್ಕ ಶಾಸ್ತಿ ಎಂಬ ಎಚ್ಚರಿಕೆ!

ಮುಂಬೈ: ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ಸಲ್ಮಾನ್ ಖಾನ್ ನಂತರ ಇದೀಗ ಬಾಲಿವುಡ್ ನಟ ಆಮೀರ್ ಖಾನ್…

1 of 170