ಸ್ಥಳೀಯ

ಒಕ್ಕಲಿಗ ಸೇವಾವಾಹಿನಿಯಿಂದ ಮನೆನಿರ್ಮಾಣಕ್ಕೆ ನೆರವಿನ‌ ಹಸ್ತ | ನ. 16: ಕಾವೂರು ಮಠಾದೀಶರಿಂದ ಪಾಂಬಾರು ತೀರ್ಥರಾಮ ಗೌಡರಿಗೆ  ಕೆಂಪುಕಲ್ಲು ಹಸ್ತಾಂತರ ಸಮಾರಂಭ

ಸಮಾನ ಮನಸ್ಕ ಒಕ್ಕಲಿಗ ಯುವಕರು ಬಡ ಕುಟುಂಬಗಳಿಗೆ ಆರ್ಥಿಕ, ಸಾಮಾಜಿಕ ಬಲವರ್ಧನೆ ಉದ್ದೇಶದಿಂದ ನೂತನವಾಗಿ ಪ್ರಾರಂಭಿಸಲಾದ ಒಕ್ಕಲಿಗ ಗೌಡ ಸೇವಾವಾಹಿನಿ ದ.ಕ., ಕರ್ನಾಟಕ ಟ್ರಸ್ಟ್ ನ ಚೊಚ್ಚಲ ಸಹಾಯಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ನ. 16ರಂದು ಆದಿಚುಂಚನಗಿರಿಯ ಮಂಗಳೂರಿನ ಕಾವೂರು ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಗಳು ಈ ನೆರವಿನ ಹಸ್ತದ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಸಮಾನ ಮನಸ್ಕ ಒಕ್ಕಲಿಗ ಯುವಕರು ಬಡ ಕುಟುಂಬಗಳಿಗೆ ಆರ್ಥಿಕ, ಸಾಮಾಜಿಕ ಬಲವರ್ಧನೆ ಉದ್ದೇಶದಿಂದ ನೂತನವಾಗಿ ಪ್ರಾರಂಭಿಸಲಾದ ಒಕ್ಕಲಿಗ ಗೌಡ ಸೇವಾವಾಹಿನಿ ದ.ಕ., ಕರ್ನಾಟಕ ಟ್ರಸ್ಟ್ ನ ಚೊಚ್ಚಲ ಸಹಾಯಾರ್ಥ ಕಾರ್ಯಕ್ರಮಕ್ಕೆ ಚಾಲನೆ ನೀಡುವ ಮೂಲಕ ನ. 16ರಂದು ಆದಿಚುಂಚನಗಿರಿಯ ಮಂಗಳೂರಿನ ಕಾವೂರು ಶಾಖಾ ಮಠಾಧೀಶರಾದ ಶ್ರೀ ಧರ್ಮಪಾಲನಾಥ ಸ್ವಾಮೀಜಿಗಳು ಈ ನೆರವಿನ ಹಸ್ತದ ಯೋಜನೆಗೆ ಚಾಲನೆ ನೀಡಲಿದ್ದಾರೆ.

maithri

ಒಕ್ಕಲಿಗ ಸಮಾಜದ ವಿಟ್ಲ ಮುಡ್ನೂರು ಗ್ರಾಮದ ಆಲಂಗಾರು ನಿವಾಸಿ ಪಾಂಬಾರು ತೀರ್ಥರಾಮ ಗೌಡರ ಮನೆಯು ಕಳೆದ ಬಾರಿಯ ಮಳೆಗಾಲದಲ್ಲಿ ಬಾರಿ ಮಳೆಗೆ ನೆಲಸಮ ಆಗುವ ಹಂತದಲ್ಲಿದ್ದು
ಪ್ರಸ್ತುತ ಆ ಮನೆಯಲ್ಲಿ ವಾಸ ಮಾಡಲು ಅಸಾಧ್ಯವಾಗಿದ್ದು, ಅವರಿಗೆ ನೂತನ ಮನೆ ನಿರ್ಮಾಣಕ್ಕೆ ಕೆಂಪುಕಲ್ಲನ್ನು ಸೇವಾ ವಾಹಿನಿಯು ನೀಡಲು ಮುಂದಾಗಿದ್ದು ಅದರಂತೆ 2500 ಕೆಂಪು ಕಲ್ಲನ್ನು ನೂತನ ಮನೆ ನಿವೇಶನಕ್ಕೆ ಪೂರೈಸಿದೆ. ಇದರ ಸಾಂಕೇತಿಕ ಹಸ್ತಾಂತರ ಕಾರ್ಯಕ್ರಮ ಇಂದು ನವೆಂಬರ್ 16 ರಂದು ಸಂಜೆ 4 ಗಂಟೆಗೆ ಜರಗಲಿದೆ.

ಒಕ್ಕಲಿಗ ಸಮಾಜದ ಅಭಿವೃದ್ಧಿಯ ಕನಸನ್ನು ಕಾಣುತ್ತಿರುವ ಸಮಾನಮನಸ್ಕ ದಾನಿಗಳ ನೆರವಿನೊಂದಿಗೆ ತಲಾ 6000 ರೂಪಾಯಿಗಳ ಸಹಾಯಹಸ್ತದ ಸಂಗ್ರಹದೊಂದಿಗೆ ಸೇವಾ ವಾಹಿನಿ ಈ ಚೊಚ್ಚಲ ಕಾರ್ಯಕ್ರಮ ಆಯೋಜಿಸಿದೆ.

ಎರಡನೇ ನೆರವಿನ ಹಸ್ತವಾಗಿ ಮುಂದಿನ ತಿಂಗಳು ಸುಳ್ಯ ತಾಲೂಕು ಪಂಬೆತ್ತಾಡಿ ಗ್ರಾಮದ ಜಾಕೆ ಜಯರಾಮ ಗೌಡರಿಗೆ ನೀಡಲು ಮುಂದಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124