Gl jewellers
ಸ್ಥಳೀಯ

ದ.ಕ. ಒಕ್ಕಲಿಗ ಗೌಡ ಸೇವಾವಾಹಿನಿ ಟ್ರಸ್ಟ್ ಲೋಕಾರ್ಪಣೆ, ಕೆಂಪುಕಲ್ಲು ಹಸ್ತಾಂತರ

Karpady sri subhramanya
ವಿಟ್ಲ: ಸಮಾನ ಮನಸ್ಕ ಒಕ್ಕಲಿಗ ಗೌಡ ಸಮಾಜದ ಯುವ ಮನಸ್ಸುಗಳು ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ. ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಎಲ್ಲಾ ವಿಧದಲ್ಲಿ ಸ್ಪಂದಿಸುವ ಗುಣವನ್ನು ನಾವು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಕರೆ ನೀಡಿದರು.

ಈ ಸುದ್ದಿಯನ್ನು ಶೇರ್ ಮಾಡಿ

SRK Ladders
Akshaya College

ವಿಟ್ಲ: ಸಮಾನ ಮನಸ್ಕ ಒಕ್ಕಲಿಗ ಗೌಡ ಸಮಾಜದ ಯುವ ಮನಸ್ಸುಗಳು ಒಂದಾಗಿ ಸೇವಾ ಚಟುವಟಿಕೆ ಪ್ರಾರಂಭಿಸಿರುವುದು ಸದ್ವಿಚಾರ. ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೂ ಎಲ್ಲಾ ವಿಧದಲ್ಲಿ ಸ್ಪಂದಿಸುವ ಗುಣವನ್ನು ನಾವು ಹೆಚ್ಚೆಚ್ಚು ಬೆಳೆಸಿಕೊಳ್ಳಬೇಕು ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಪೂಜ್ಯ ಶ್ರೀ ಡಾ| ಧರ್ಮಪಾಲನಾಥ ಸ್ವಾಮೀಜಿ ಕರೆ ನೀಡಿದರು.

ವಿಟ್ಲ ಮುಡ್ನೂರು ಗ್ರಾಮದ ಅಲಂಗಾರು ತೀರ್ಥರಾಮ ಗೌಡ ಪಾಂಬಾರು ಅವರಿಗೆ ಮನೆ ನಿರ್ಮಾಣಕ್ಕೆ ಕೆಂಪುಕಲ್ಲು ಹಸ್ತಾಂತರ ಕಾರ್ಯಕ್ರಮ ಮತ್ತು ನೂತನ ದ.ಕ. ಒಕ್ಕಲಿಗ ಗೌಡ ಸೇವಾವಾಹಿನಿ ಟ್ರಸ್ಟ್ ಲೋಕಾರ್ಪಣೆ ಸಮಾರಂಭದಲ್ಲಿ ಆಶೀರ್ವಚನ‌ ನೀಡಿದರು.

Sampya jathre

ಮುಖ್ಯ ಅತಿಥಿಗಳಾಗಿದ್ದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಹಾಗೂ ಕ್ಯಾಂಪ್ಕೋ ನಿರ್ದೇಶಕರಾದ ಕೃಷ್ಣಪ್ರಸಾದ್ ಮಡ್ತಿಲ ಮಾತನಾಡಿ, ಒಕ್ಕಲಿಗ ಗೌಡ ಸೇವಾ ವಾಹಿನಿ ಟ್ರಸ್ಟ್ ನೊಂದವರ ಬಾಳಿನ ಆಶಾಕಿರಣ. ಸ್ವಂತಕ್ಕೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂಬುದನ್ನು ಟ್ರಸ್ಟ್ ನ ಉತ್ಸಾಹಿ ಯುವಕರು ಕೇವಲ ಮಾತಾಗದೆ ಅರ್ಥಪೂರ್ಣವಾಗಿ ಅಳವಡಿಸಿಕೊಂಡಿದ್ದಾರೆ. ರಾಜಕೀಯ ರಹಿತ ಈ ತಂಡ ಇದೇ ರೀತಿ ಸ್ವಚ್ಚ ಕಲ್ಪನೆಯನ್ನಿಟ್ಟುಕೊಂಡು ಮುಂದುವರಿದರೆ ಸಮಾಜಕ್ಕೆ ಒಳ್ಳೆಯ ಭವಿಷ್ಯವಿದೆ ಎಂದು ಅಭಿಪ್ರಾಯಪಟ್ಟರು.

ವಿಟ್ಲಮುಡ್ನೂರು ಗ್ರಾ.ಪಂ. ಅಧ್ಯಕ್ಷ ಪುನೀತ್ ಮಾಡತ್ತಾರು, ಇಂತಹ ಒಂದು ಪರಿಕಲ್ಪನೆ ನಮ್ಮ ಸಮಾಜದಲ್ಲಿ ಹುಟ್ಟಿಕೊಂಡಿರುವುದು ನಮಗೆಲ್ಲ ಆದರ್ಶಪ್ರಾಯವಾದುದು ಎಂದರು.

ಸಮಾಜದ ಹಿರಿಯರಾದ ಬೋಜಪ್ಪ ಗೌಡ ಮಾಡತ್ತಾರು, ಕಿಶೋರ್ ಪುಣಚ ವೇದಿಕೆಯಲ್ಲಿದ್ದರು. ಜಯರಾಮ್ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು.

ಅಲಂಗಾರು ಹಾಗೂ ಪುಣಚ, ಮಾಡತ್ತಡ್ಕ ಗ್ರಾಮಸ್ಥರು ಪಾಲ್ಗೊಂಡಿದ್ದರು.
ಸೇವಾ ವಾಹಿನಿ ಟ್ರಸ್ಟ್ ನ್ನು ಸ್ವಾಮೀಜಿ’ಯವರು ಮತ್ತು ಗ್ರಾಮಸ್ಥರು ಪುಂಡಿಪಣವು’ಗೆ ನಾಣ್ಯ ಹಾಕಿ(ದೇಣಿಗೆ ನೀಡಿ) ಸೇವಾವಾಹಿನಿಗೆ ಹಸ್ತಾಂತರಿಸುವುದರೊಂದಿಗೆ ಲೋಕಾರ್ಪಣೆಗೊಳಿಸಿದರು.

ಈ ವೇಳೆ ಗುಡ್ಡೆ ಕುಸಿತದಿಂದ ಮನೆ ಹಾನಿಗೊಳಗಾಗಿ ಸಂತ್ರಸ್ತರಾದ ವಿಟ್ಲ ಮುಡ್ನೂರು ಗ್ರಾಮದ ಅಲಂಗಾರು ನ ತೀರ್ಥರಾಮ ಗೌಡ ಪಾಂಬಾರು ಅವರ ಮನೆ ನಿರ್ಮಾಣಕ್ಕೆ ಟ್ರಸ್ಟಿನ ಸಹಾಯಾರ್ಥ ಗೌಡ ಸಮಾಜದ ಬಂಧುಗಳಿಂದ ಮಾಸಿಕ ತಲಾ ಕನಿಷ್ಠ 500 ರೂಪಾಯಿಯಂತೆ ಸಂಗ್ರಹಿಸಿದ ಮೊತ್ತದಲ್ಲಿ 2500 ಕೆಂಪು ಕಲ್ಲುಗಳನ್ನು ಫಲಾನುಭವಿಗೆ ತೆಂಗಿನ ಗಿಡ ನೀಡುವ ಮೂಲಕ ವಿದ್ಯುಕ್ತವಾಗಿ ಹಸ್ತಾಂತರಿಸಲಾಯಿತು. ಎರಡನೇ ನೆರವಿನ ಹಸ್ತವಾಗಿ ಮುಂದಿನ ತಿಂಗಳು ಸುಳ್ಯ ತಾಲೂಕು ಪಂಬೆತ್ತಾಡಿ ಗ್ರಾಮದ ಜಾಕೆ ಜಯರಾಮ ಗೌಡರಿಗೆ ನೆರವು ನೀಡಲು ಟ್ರಸ್ಟ್ ಮುಂದಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಬಾವಿಗೆ ಬಿದ್ದ ಬೆಕ್ಕಿನಿಂದ ಅಟ್ಯಾಕ್!! ಪುತ್ತೂರಿನ ತೆಂಕಿಲದಲ್ಲಿ ರಕ್ಷಣೆಗೆ ಮುಂದಾದವರ ಮೇಲೆಯೇ ತಿರುಗಿ ಬಿದ್ದ ಬೆಕ್ಕು!!

ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ…

12ರಲ್ಲಿ 12 ಸೀಟುಗಳನ್ನು ಬಾಚಿದ ಸಹಕಾರ ಭಾರತಿ|ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ರಂಗೇರಿದ ಕದನದಲ್ಲಿ ಜಯ ಸಾಧಿಸಿದ ಬಿಜೆಪಿ

ರಂಗೇರಿದ ಚುನಾವಣಾ ಆಖಾಡದಲ್ಲಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯ ಎಲ್ಲಾ 12 ಸದಸ್ಯರು ಪುತ್ತೂರು…