ಸ್ಥಳೀಯ

22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ.!!

ಇಪ್ಪತ್ತೆರಡು ವರ್ಷಗಳಿಂದ ಪ್ರತ್ಯೇಕವಾಗಿ ಒಂಟಿ ಯಾಗಿದ್ದ ವೃದ್ಧರೊಬ್ಬರು ಮಕ್ಕಳನ್ನು ಕೂಡಿಕೊಂಡ ಮನ ಮಿಡಿಯುವ ಘಟನೆ ಕಾಪುವಿನಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಇಪ್ಪತ್ತೆರಡು ವರ್ಷಗಳಿಂದ ಪ್ರತ್ಯೇಕವಾಗಿ ಒಂಟಿ ಯಾಗಿದ್ದ ವೃದ್ಧರೊಬ್ಬರು ಮಕ್ಕಳನ್ನು ಕೂಡಿಕೊಂಡ ಮನ ಮಿಡಿಯುವ ಘಟನೆ ಕಾಪುವಿನಲ್ಲಿ ನಡೆದಿದೆ.

maithri

82 ವರ್ಷ ಪ್ರಾಯದ ಅಣ್ಣಯ್ಯ ಬಂಗೇರ ಎಂಬವರು ಮನೆ ಮಂದಿ ಜತೆ ಮುನಿಸಿಕೊಂಡು 22 ವರ್ಷಗಳಿಂದ ದೂರ ಉಳಿದುಕೊಂಡಿದ್ದರು. ಕಾಪುವಿನ ಮಜೂರಿನಲ್ಲಿ ಒಂಟಿಯಾಗಿ ಜೀವನ ನಡೆಸುತ್ತಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇತ್ತೀಚೆಗೆ ಹಾಸಿಗೆ ಹಿಡಿದಿದ್ದರು.

ಸ್ಥಳೀಯರು ನೀಡಿದ ಅನ್ನ ಆಹಾರ, ಔಷಧೋಪಚಾರದ ನೆರವು ಪಡೆದುಕೊಂಡಿದ್ದರು. ತಿಂಗಳ ಹಿಂದೆ ವೃದ್ಧರ ಆರೋಗ್ಯ ಸ್ಥಿತಿ ಬಿಗಡಾಯಿಸಿತ್ತು. ಈ ಸಂದರ್ಭ ಪಂ. ಅಭಿವೃದ್ಧಿ ಅಧಿಕಾರಿ ನೆರವಿಗೆ ಧಾವಿಸಿದ್ದರು. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಸಹಕಾರದಿಂದ ವೃದ್ಧರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.

ವೃದ್ಧರು ಗುಣಮುಖಗೊಂಡಿದ್ದರಿಂದ ಆಸ್ಪತ್ರೆಯಿಂದ ಬಿಡುಗಡೆ ಗೊಳಿಸಿದ ಒಳಕಾಡು ಅವರು ಹೊಸಬದುಕು ಆಶ್ರಮದಲ್ಲಿ ಪುನರ್‌ವಸತಿ ಕಲ್ಪಿಸಿದ್ದರು. ಹಿರಿಯ ನಾಗರಿಕರ ಸಹಾಯವಾಣಿಗೆ ಮಾಹಿತಿ ನೀಡಿದ್ದರು. ವೃದ್ಧರು ನೀಡಿದ ಮಾಹಿತಿಯಂತೆ ಸಂಬಂಧಿಕರ ವಿಳಾಸ ಪತ್ತೆ ಕಾರ್ಯ ನಡೆಸಿ ಮನೆಯವರನ್ನು ಸಂಪರ್ಕಿಸಿ, ಬಂಗೇರರ ಪುತ್ರ ಹಾಗೂ ಪುತ್ರಿ ಆಶ್ರಮಕ್ಕೆ ಬಂದು, ತಂದೆಯನ್ನು ಮನೆಗೆ ಸೇರಿಸಿಕೊಂಡರು. ಮಕ್ಕಳು ತಂದೆಯವರ ಗುರುತು ಹಿಡಿದರೂ, 22 ವರ್ಷ ಮಕ್ಕಳಿಂದ ಅಂತರ ಕಾಯ್ದುಕೊಂಡಿದ್ದರಿಂದ ಮಕ್ಕಳ ಗುರುತು ಹಿಡಿಯಲು ತಂದೆ ಬಹಳ ಹೊತ್ತು ತೆಗೆದುಕೊಂಡರು.

ಕಾರ್ಯಾಚರಣೆಯಲ್ಲಿ ಹಿರಿಯ ನಾಗರಿಕ ಸಹಾಯವಾಣಿಯ ಅಶ್ವಿನಿ, ಜಿಲ್ಲಾ ಯೋಜನಾ ಸಯೋಜಕಿ ಅಶ್ವಿನಿ, ಆಪ್ತಸಮಾಲೋಚಕ ರೋಶನ್ ಅಮೀನ್ ಭಾಗಿಯಾಗಿದ್ದರು. ಕಾಪು ಠಾಣೆಯ ಪೋಲಿಸರು, ಆರೋಗ್ಯ ಇಲಾಖೆಯ ಸಿಬಂದಿ, ವಿನಯಚಂದ್ರ ಸಹಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124