ಪುತ್ತೂರು: ಬಲ್ನಾಡು ವಲಯದ ಉಜಿರುಪಾದೆ ಕಾರ್ಯಕ್ಷೇತ್ರದ ಬಲ್ನಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಕೊಡುಗೆಯಾಗಿ ನೀಡಿದ ಬೆಂಚು ಡೆಸ್ಕ್ ವಿತರಣಾ ಕಾರ್ಯಕ್ರಮ ನಡೆಯಿತು.
ಬಲ್ನಾಡು ವಲಯದ ಮೇಲ್ವಿಚಾರಕ ಪ್ರಶಾಂತ್ ಕುಮಾರ್ ಅವರು ಬೆಂಚು ಡೆಸ್ಕ್ ಗಳನ್ನು ವಿತರಣೆ ಮಾಡಿದರು.
ಕಾರ್ಯಕ್ರಮದಲ್ಲಿ ಬಲ್ನಾಡು ಗ್ರಾಮ ಪಂಚಾಯತ್ ಅಧ್ಯಕ್ಷೆ ಪರಮೇಶ್ವರಿ ಭಟ್, ಟೌನ್ ಬ್ಯಾಂಕ್ ನಿರ್ದೇಶಕ ಕಿರಣ್ ರೈ, sdmc ಅಧ್ಯಕ್ಷ ರಾಧಾಕೃಷ್ಣ ಪೂಜಾರಿ, ಮುಖ್ಯಶಿಕ್ಷಕಿ ಭವಾನಿ, ಶಿಕ್ಷಕ ವೃಂದ, ಗ್ರಾಮಸ್ಥರು, ಉಜಿರುಪಾದೆ ಒಕ್ಕೂಟದ ಪದಾಧಿಕಾರಿಗಳು, ಸೇವಾಪ್ರತಿನಿಧಿ ಹರಿಪ್ರಸಾದ್ ಉಪಸ್ಥಿತರಿದ್ದರು.