tamanvi
ಸ್ಥಳೀಯ

 ಡಾ. ಪ್ರಭಾಕರ ಶಿಶಿಲ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆ

D_shiva_bhat
27ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದಲ್ಲಿ ಫೆ.21 ಮತ್ತು 22ರಂದು ನಡೆಯುವ 27ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಪ್ರಭಾಕರ ಶಿಶಿಲ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ.ಎಂ.ಪಿ. ಶ್ರೀನಾಥ್ ತಿಳಿಸಿದ್ದಾರೆ.

maithri

ಸುಳ್ಯದಲ್ಲಿ ನೆಲೆಸಿರುವ ಡಾ.ಪ್ರಭಾಕರ ಶಿಶಿಲರು ಕನ್ನಡದ ಶ್ರೇಷ್ಠ ಸಾಹಿತಿ. ಕನ್ನಡದಲ್ಲಿ 10 ಕಾದಂಬರಿ, 8 ಕಥಾ ಸಂಕಲನ, 5 ಪ್ರವಾಸ ಕಥನ ಸೇರಿ ಒಟ್ಟು 54 ಸೃಜನಶೀಲ ಕೃತಿಗಳು, 165 ಅರ್ಥಶಾಸ್ತ್ರ ವಿಚಾರ ಸಾಹಿತ್ಯ ಕೃತಿಗಳು ಹಾಗೂ ಆಂಗ್ಲ ಭಾಷೆಯಲ್ಲಿ 10 ಅರ್ಥಶಾಸ್ತ್ರ ಕೃತಿಗಳನ್ನು ರಚಿಸಿದ್ದಾರೆ. ಒಟ್ಟು 225 ಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ. ವಿವಿಧ ಪತ್ರಿಕೆಗಳು ಹಾಗೂ ನಿಯತಕಾಲಿಕೆಗಳಲ್ಲಿ ಇವರ ಸುಮಾರು 250ಕ್ಕೂ ಅಧಿಕ ಲೇಖನಗಳು ಪ್ರಕಟವಾಗಿವೆ.

ಅನೇಕ ಲಾವಣಿ ಮತ್ತು ಗೀಗೀ ಪದ ರಚಿಸಿದ್ದಾರೆ. ಇವರು ಬರೆದ ಪುಲಸ್ತ್ರೀ ಕೃತಿ ಸಂಸ್ಕೃತ, ಹಿಂದಿ, ಮಲಯಾಳಂ, ತೆಲುಗು, ತಮಿಳು, ತುಳು, ಕೊಂಕಣಿ, ಮರಾಠಿ, ಅರೆಭಾಷೆ, ಕೊಡವ, ಗುಜರಾಥಿ, ಬೆಂಗಾಲಿ, ಪಂಜಾಬಿ, ಇಂಗ್ಲಿಷ್ ಭಾಷೆಗಳಿಗೆ ಅನುವಾದಗೊಂಡಿದೆ. ಸುಳ್ಯ ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಉಪನ್ಯಾಸಕರಾಗಿ, ಪ್ರಾಂಶುಪಾಲರಾಗಿ ನಿವೃತ್ತರಾದವರು. ಈ ಹಿಂದೆ ಸುಳ್ಯ ತಾಲೂಕಿನವರಾದ ಪ್ರೊ.ಕೋಡಿ ಕುಶಾಲಪ್ಪ ಗೌಡ, ಸುಬ್ರಾಯ ಚೊಕ್ಕಾಡಿ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 125