ಸ್ಥಳೀಯ

ಪುತ್ತೂರು : ಐಡಿಎ ಪುತ್ತೂರು ಶಾಖೆಯ ಪದಾಧಿಕಾರಿಗಳ ಪದಗ್ರಹಣ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಂಡಿಯನ್ ಡೆಂಟಲ್ ಅಸೋಸಿಯೇಷನ್ (ಬಿಡಿಎ) ಇದರ ಪುತ್ತೂರು ಶಾಖೆಯ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಐಡಿಎ ಭವನ ಪುತ್ತೂರು ಇಲ್ಲಿ ನಡೆಯಿತು. ಜಿಲ್ಲಾ ಗೃಹ ರಕ್ಷಕದಳದ ಗೌರವ ಸಮಾದೇಷ್ಠರಾಗಿ ಕಾರ್ಯನಿರ್ವಹಿಸಿದ್ದ, ಬಾಯಿ ಮತ್ತು ಮುಖ ರೋಗತಜ್ಞ ಡಾ.ಮುರಳೀ ಮೋಹನ್ ಚೂಂತಾರು ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ, ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು.ತಮ್ಮ ಅನುಭವವನ್ನು ಹಂಚಿಕೊಳ್ಳುತ್ತಾ, ಪುತ್ತೂರು ದಂತ ವೈದ್ಯರ ಶಾಖೆ ಮಾಡುತ್ತಿರುವ ಕಾರ್ಯ ಹಾಗೂ ಸಾಧನೆಗಳ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಉಪಸ್ಥಿತರಿದ್ದ ಎಲ್ಲಾದಂತ ವೈದ್ಯರಿಗೂ ಸ್ಮರಣಿಕೆಯನ್ನು ಹಂಚಿದರು ಐಡಿಎ ಪುತ್ತೂರು ಶಾಖೆಯ ನೂತನ ಅಧ್ಯಕ್ಷೆ ಡಾ.ಆಶಾ ರಾಘವೇಂದ್ರ ಅವರಿಗೆ ಡಾ. ರಾಜಾರಾಮ ಕೆ.ಬಿ ಅವರು ಪ್ರಮಾಣ ವಚನ ಬೋಧಿಸಿದರು.

maithri

ಸಂಘದ ಕೇಂದ್ರ ಕೌನ್ಸಿಲ್ ಸದಸ್ಯ ಡಾ. ರಾಘವೇಂದ್ರ ಪಿದಮಲೆ, ಸಂಘದ ಕೋಶಾಧಿಕಾರಿ ಡಾ. ಚರಣ್ ಕಜೆ, ಪದಾಧಿಕಾರಿಗಳಾದ ಡಾ. ಎಲ್. ಕೃಷ್ಣ ಪ್ರಸಾದ್, ಡಾ. ಶ್ರೀ ಕೃಷ್ಣ ಭಟ್, ಡಾ. ಶ್ರೀ ಪ್ರಕಾಶ್ ಭಟ್, ಡಾ. ವಿಶು ಕುಮಾರ್, ಡಾ.ಮುರಳೀಧರ್ ರೈ, ಡಾ. ಶಿವಾನಂದ ಹೆಚ್, ಡಾ.ಮುರಳೀಧರ್ ಭಟ್, ಡಾ. ರಿತೇಶ್ ಕೆ.ಬಿ, ಡಾ.ಶೃತಿ ಹೆಗ್ಡೆ,ಡಾ. ವಾಣಿರಿತೇಶ್ ಡಾ. ಆಶಾ ಜಿ.ಕೆ, ಡಾ. ಗಣೇಶ್ ಚಿಂತನ್, ಡಾ. ಹರ್ಷ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ನಿಕಟಪೂರ್ವಾಧ್ಯಕ್ಷೆ ಡಾ. ಆಶಾ ಅಮಾನ್ ಕಲ್ಲು ಸ್ವಾಗತಿಸಿ, ಕಾರ್ಯದರ್ಶಿ ಡಾ. ಕೀರ್ತನ್ ಕಜೆ ವಂದಿಸಿದರು. ಡಾ. ದೀಪಾಲಿ ಡೋಂಗ್ರೆ ಡಾ.ರಮ್ಯಾ ಕಜೆ ಹಾಗೂ ಡಾ. ಅಮೃತ ಪ್ರಸಾದ್ ಅವರು ಕಾರ್ಯಕ್ರಮ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಬಳಿಕ ಐಡಿಎ ಸದಸ್ಯರು ಮತ್ತು ಸದಸ್ಯರ ಕುಟುಂಬ, ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124