Gl
ಸ್ಥಳೀಯ

ಬಾವಿಗೆ ಬಿದ್ದ ಬೆಕ್ಕಿನಿಂದ ಅಟ್ಯಾಕ್!! ಪುತ್ತೂರಿನ ತೆಂಕಿಲದಲ್ಲಿ ರಕ್ಷಣೆಗೆ ಮುಂದಾದವರ ಮೇಲೆಯೇ ತಿರುಗಿ ಬಿದ್ದ ಬೆಕ್ಕು!!

ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ದರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ದರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.

Pashupathi

ನಿನ್ನೆ ತೆಂಕಿಲ ಬಳಿಯ ಲಕ್ಷ್ಮೀ ಎಂಬವರ ಮನೆಯ ಬಾವಿಗೆ ಬೆಕ್ಕು ಬಿದ್ದಿತ್ತು. ಅದರಂತೆ ಇಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಕ್ಕಿನ ರಕ್ಷಣೆಗೆಂದು ಧಾವಿಸಿದ್ದರು. ಬೆಕ್ಕನ್ನ ಹಿಡಿಯಲು ಬಾವಿಯೊಳಗಡೆ ಸಿದ್ದರೂಢ ಮತ್ತು ಮೌನೇಶ್ ಎಂಬವರು ಇಳಿದಿದ್ದರು.

akshaya college

ಬಾವಿಯೊಳಗಿನ ಒಂದು ಬಿಲದೊಳಗೆ ಬೆಕ್ಕು ಅವಿತುಕೊಂಡಿತ್ತು. ಬೆಕ್ಕನ್ನ ಹಿಡಿಯಲು ಪ್ರಯತ್ನಿಸಿದಾಗ ಏಕಾಏಕಿ ಅಗ್ನಿಶಾಮಕದಳದ ಇಬ್ಬರ ಮೇಲೆ ಎರಗಿ ಗಂಭೀರ ಗಾಯಗೊಳಿಸಿದೆ ಎಂದು ತಿಳಿದುಬಂದಿದೆ.

ಸರಿ ಸುಮಾರು ಏಳು ನಿಮಿಷಗಳ ಕಾಲ ಅಗ್ನಿಶಾಮಕ ದಳದ ಸಿಬ್ಬಂದಿಯ ಕೈಯನ್ನ ಬೆಕ್ಕು ಕಚ್ಚಿ ಹಿಡಿದಿತ್ತು. ಪರಿಣಾಮ ಬೆಕ್ಕು ಕಚ್ಚಿದ ರೋಷಕ್ಕೆ ಬಾವಿಯೊಳಗಡೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಗಾಯಾಳುಗಳು ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ…