tamanvi
ಸ್ಥಳೀಯ

ಬಾವಿಗೆ ಬಿದ್ದ ಬೆಕ್ಕಿನಿಂದ ಅಟ್ಯಾಕ್!! ಪುತ್ತೂರಿನ ತೆಂಕಿಲದಲ್ಲಿ ರಕ್ಷಣೆಗೆ ಮುಂದಾದವರ ಮೇಲೆಯೇ ತಿರುಗಿ ಬಿದ್ದ ಬೆಕ್ಕು!!

D_shiva_bhat
ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ದರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ದರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.

maithri

ನಿನ್ನೆ ತೆಂಕಿಲ ಬಳಿಯ ಲಕ್ಷ್ಮೀ ಎಂಬವರ ಮನೆಯ ಬಾವಿಗೆ ಬೆಕ್ಕು ಬಿದ್ದಿತ್ತು. ಅದರಂತೆ ಇಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಕ್ಕಿನ ರಕ್ಷಣೆಗೆಂದು ಧಾವಿಸಿದ್ದರು. ಬೆಕ್ಕನ್ನ ಹಿಡಿಯಲು ಬಾವಿಯೊಳಗಡೆ ಸಿದ್ದರೂಢ ಮತ್ತು ಮೌನೇಶ್ ಎಂಬವರು ಇಳಿದಿದ್ದರು.

ಬಾವಿಯೊಳಗಿನ ಒಂದು ಬಿಲದೊಳಗೆ ಬೆಕ್ಕು ಅವಿತುಕೊಂಡಿತ್ತು. ಬೆಕ್ಕನ್ನ ಹಿಡಿಯಲು ಪ್ರಯತ್ನಿಸಿದಾಗ ಏಕಾಏಕಿ ಅಗ್ನಿಶಾಮಕದಳದ ಇಬ್ಬರ ಮೇಲೆ ಎರಗಿ ಗಂಭೀರ ಗಾಯಗೊಳಿಸಿದೆ ಎಂದು ತಿಳಿದುಬಂದಿದೆ.

ಸರಿ ಸುಮಾರು ಏಳು ನಿಮಿಷಗಳ ಕಾಲ ಅಗ್ನಿಶಾಮಕ ದಳದ ಸಿಬ್ಬಂದಿಯ ಕೈಯನ್ನ ಬೆಕ್ಕು ಕಚ್ಚಿ ಹಿಡಿದಿತ್ತು. ಪರಿಣಾಮ ಬೆಕ್ಕು ಕಚ್ಚಿದ ರೋಷಕ್ಕೆ ಬಾವಿಯೊಳಗಡೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಗಾಯಾಳುಗಳು ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 125