tamanvi
ಸ್ಥಳೀಯ

ಬಾವಿಗೆ ಬಿದ್ದ ಬೆಕ್ಕಿನಿಂದ ಅಟ್ಯಾಕ್!! ಪುತ್ತೂರಿನ ತೆಂಕಿಲದಲ್ಲಿ ರಕ್ಷಣೆಗೆ ಮುಂದಾದವರ ಮೇಲೆಯೇ ತಿರುಗಿ ಬಿದ್ದ ಬೆಕ್ಕು!!

ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ದರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಕ್ಷಣೆಗೆಂದು ಬಂದ ಅಗ್ನಿಶಾಮಕದಳದ ಸಿಬ್ಬಂದಿಗಳ ಮೇಲೆ ಬೆಕ್ಕೊಂದು ಅಟ್ಯಾಕ್ ಮಾಡಿರುವ ಘಟನೆ ಪುತ್ತೂರಿನ ತೆಂಕಿಲ ಕ್ರಾಸ್ ಬಳಿ ನಡೆದಿದೆ. ಅಗ್ನಿಶಾಮಕ ದಳದ ಸಿದ್ದರೂಢ ಮತ್ತು ಮೌನೇಶ್ ಎಂಬವರಿಗೆ ಗಂಭೀರ ಗಾಯಗಳಾಗಿವೆ.

ನಿನ್ನೆ ತೆಂಕಿಲ ಬಳಿಯ ಲಕ್ಷ್ಮೀ ಎಂಬವರ ಮನೆಯ ಬಾವಿಗೆ ಬೆಕ್ಕು ಬಿದ್ದಿತ್ತು. ಅದರಂತೆ ಇಂದು ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಕ್ಕಿನ ರಕ್ಷಣೆಗೆಂದು ಧಾವಿಸಿದ್ದರು. ಬೆಕ್ಕನ್ನ ಹಿಡಿಯಲು ಬಾವಿಯೊಳಗಡೆ ಸಿದ್ದರೂಢ ಮತ್ತು ಮೌನೇಶ್ ಎಂಬವರು ಇಳಿದಿದ್ದರು.

ಬಾವಿಯೊಳಗಿನ ಒಂದು ಬಿಲದೊಳಗೆ ಬೆಕ್ಕು ಅವಿತುಕೊಂಡಿತ್ತು. ಬೆಕ್ಕನ್ನ ಹಿಡಿಯಲು ಪ್ರಯತ್ನಿಸಿದಾಗ ಏಕಾಏಕಿ ಅಗ್ನಿಶಾಮಕದಳದ ಇಬ್ಬರ ಮೇಲೆ ಎರಗಿ ಗಂಭೀರ ಗಾಯಗೊಳಿಸಿದೆ ಎಂದು ತಿಳಿದುಬಂದಿದೆ.

ಸರಿ ಸುಮಾರು ಏಳು ನಿಮಿಷಗಳ ಕಾಲ ಅಗ್ನಿಶಾಮಕ ದಳದ ಸಿಬ್ಬಂದಿಯ ಕೈಯನ್ನ ಬೆಕ್ಕು ಕಚ್ಚಿ ಹಿಡಿದಿತ್ತು. ಪರಿಣಾಮ ಬೆಕ್ಕು ಕಚ್ಚಿದ ರೋಷಕ್ಕೆ ಬಾವಿಯೊಳಗಡೆ ಅಗ್ನಿಶಾಮಕ ದಳದ ಸಿಬ್ಬಂದಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿತ್ತು. ಸದ್ಯ ಗಾಯಾಳುಗಳು ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರು: ಪ್ರೆಸ್ ಕ್ಲಬ್ ಅವರಣದಲ್ಲಿ ಶಾಸಕರ ಬೆಂಬಲಿಗರಿಂದ ಹಕೀಂ ಕೂರ್ನಡ್ಕ ಪ್ರೆಸ್‌ಮೀಟ್‌ ತಡೆ ಯತ್ನ ..!!

ಪುತ್ತೂರು: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ವಿರುದ್ಧ ಪ್ರೆಸ್‌ಮೀಟ್ ನಡೆಸಲು ಆಗಮಿಸಿದ್ದ…

1 of 134