ಪುತ್ತೂರು: ರಾಜ್ಯ ಯುವಜನ ಒಕ್ಕೂಟ (ರಿ) ಬೆಂಗಳೂರು ಇದರ 2025 ನೇ ಸಾಲಿನ ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿ ಪ್ರಕಟಗೊಂಡಿದೆ. ಪ್ರಶಸ್ತಿ ಗೆ ಪುತ್ತೂರಿನ ಶ್ರೀಕಾಂತ್ ಪೂಜಾರಿ ಬಿರಾವು ಆಯ್ಕೆಗೊಂಡಿರುತ್ತಾರೆ.ಯುವಜನರ ಸಬಲೀಕರಣದಲ್ಲಿ ತೊಡಗಿಸಿಕೊಂಡಿರುವ ಇವರು ಸಾಹಿತ್ಯ,ಬರವಣಿಗೆ,ತರಬೇತಿ,ಸಂಪನ್ಮೂಲ ವ್ಯಕ್ತಿಯಾಗಿ ಇನ್ನಿತರ ಕ್ಷೇತ್ರದಲ್ಲಿ ಅಪ್ರತಿಮ ಸಾಧಕರು.ತರಬೇತುದಾರರಾಗಿ ರಾಜ್ಯಾದ್ಯಂತ ಒಟ್ಟು 500 ಮಿಕ್ಕಿ ಅಧಿಕ ಕಾರ್ಯಕ್ರಮಗಳನ್ನು ಅಯೋಜಿಸಿ ಸುಮಾರು ಎಂಬತ್ತು ಸಾವಿರ ಯುವಜನರಿಗೆ ಜೀವನ ಕೌಶಲ್ಯ, ವೃತ್ತಿ ಮಾರ್ಗದರ್ಶನ, ನಾಯಕತ್ವ ತರಬೇತಿ, ಉದ್ಯಮಶೀಲತಾ ತರಬೇತಿ ಇನ್ನಿತರ ವಿಷಯಗಳ ಕುರಿತಾಗಿ ಶಾಲಾ ಕಾಲೇಜು, ಯುವಕ ಯುವತಿ ಮಂಡಲ ಮುಂತಾದವರಿಗೆ ತರಬೇತಿ ನೀಡಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 13 ಉದ್ಯೋಗ ಮೇಳವನ್ನು ಅಯೋಜಿಸಿ ಹಲವಾರು ಯುವಜನರಿಗೆ ಉದ್ಯೋಗಕ್ಕೆ ನೇರವಾಗಿದ್ದಾರೆ.ಈಗಿನ ಸಾಮಾಜಿಕ ಪಿಡುಗುಗಳಾದ ಸಾಮಾಜಿಕ ಜಾಲತಾಣ,ಮಾದಕ ವ್ಯಸನ,ಇದರ ಕುರಿತಾಗಿ ಹಳ್ಳಿ ಹಳ್ಳಿಗಳಿಗೆ ತೆರಳಿ ಕಾರ್ಯಕ್ರಮ ವನ್ನು ಅಯೋಜಿಸಿ ಜಾಗೃತಿ ಮೂಡಿಸುತ್ತಿದ್ದಾರೆ.ಭಾರತ ಸರಕಾರ ಮತ್ತು ರಾಜ್ಯ ಸರಕಾರದ ಹಲವಾರು ಯುವಜನ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಸಂಘಿಟಿಸಿರುತ್ತಾರೆ.ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ದೆಹಲಿಯಲ್ಲಿ ನಡೆದ ಕಾರ್ಯಕ್ರಮಕ್ಕೆ ಯೂತ್ ಚಾಂಪಿಯನ್ ಆಗಿ ಭಾಗವಹಿಸಿದ ಇವರು ಕರ್ನಾಟಕ ಮತ್ತು ಕೇರಳದ ಕಾರ್ಯಕ್ರಮಗಳ ತೀರ್ಪುಗಾರ ರಾಗಿದ್ದಾರೆ.ಅಂತರಾಷ್ಟ್ರೀಯ ಸಂಸ್ಥೆಗಳಾದ ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೋಗ್ರಾಮ್ ಇದರ ಜೀವನ ಕೌಶಲ್ಯ ಮತ್ತು ಉದ್ಯಮಶೀಲತಾ ತರಬೇತುದಾರರಾಗಿರುತ್ತಾರೆ.ಯುನೈಟೆಡ್ ನೇಷನ್ಸ್ ಇಂಟರ್ನ್ಯಾಷನಲ್ ಚಿಲ್ಡ್ರನ್ ಫಂಡ್ ಇದರ ವೃತ್ತಿ ಮಾರ್ಗದರ್ಶನ ತರಬೇತುದಾರರಾಗಿದ್ದಾರೆ.ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಜೀವನ ಕೌಶಲ್ಯ ತರಬೇತುದಾರರಾಗಿದ್ದಾರೆ.ಹಲವಾರು ಸಾಹಿತ್ಯ ಸಮ್ಮೇಳನ ,ಕವಿಗೊಷ್ಠಿಗಳಲ್ಲಿ ಭಾಗವಹಿಸಿದ ಇವರು ಉತ್ತಮ ಬರಹಗಾರರು ಇವರ ಲೇಖನ ಹಲವಾರು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ.ಇವರ ಯುವಜನ ಸಂಬಂಧಿಸಿದ ಸಾಧನೆಗೆ ಕರ್ನಾಟಕ ಸರಕಾರದಿಂದ ರಾಜ್ಯ ಅತ್ಯುತ್ತಮ ಜೀವನ ಕೌಶಲ್ಯ ಸುಗಮಕಾರ ಪ್ರಶಸ್ತಿ, ಮಾಮ್ ಇನ್ಸ್ ಫೈರ್ ಆವಾರ್ಡ್,ರಾಜ್ಯ ಸಾಧನಶ್ರೀ ಪ್ರಶಸ್ತಿ, ಸಾಹಿತ್ಯ ಸರಸ್ಪತಿ ಬಿರುದು ಲಭಿಸಿದೆ.ತನ್ನ ಪ್ರಾಥಮಿಕ ಶಿಕ್ಷಣವನ್ನು ದ.ಕ.ಜಿ.ಪ ಹಿ ಪ್ರಾ ಶಾಲೆ ರಾಗಿಕುಮೇರಿ ಬಪ್ಪಳಿಗೆ,ಫ್ರೌಢ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಸ.ಪ.ಪೂ ಕಾಲೇಜು ಕೊಂಬೆಟ್ಟು,ಪದವಿ ಶಿಕ್ಷಣ ವಿವೇಕಾನಂದ ಪದವಿ ಕಾಲೇಜು ಪುತ್ತೂರು, ಅರ್ಥಶಾಸ್ತ್ರ ದಲ್ಲಿ ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಿಂದ ಪಡೆದುಕೊಂಡಿದ್ದಾರೆ.ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರರಾದ ಇವರು ಪುತ್ತೂರು ತಾಲ್ಲೂಕು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ . ಪುತ್ತೂರು ಬಿರಾವು ಎಂಬಲ್ಲಿ ತಾಯಿ ಸುಶೀಲಾ, ಪತ್ನಿ ಲಾವಣ್ಯ ಅಂಚನ್ ,ತಮ್ಮ ಮೋಹನ್ ರವರೊಂದಿಗೆ ವಾಸವಿದ್ದಾರೆ.ಫೆಬ್ರವರಿ 5 ರಂದು ಮುದ್ದೇಬಿಹಾಳ ದಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.
ಸ್ವಾಮಿ ವಿವೇಕಾನಂದ ರಾಜ್ಯ ಸದ್ಬಾವನಾ ಪ್ರಶಸ್ತಿಗೆ ಶ್ರೀಕಾಂತ್ ಪೂಜಾರಿ ಬಿರಾವು | 500 ಕ್ಕೂ ಮಿಕ್ಕಿ ಕಾರ್ಯಕ್ರಮಗಳ ಮುಖಾಂತರ 80,000 ಯುವಜನರಿಗೆ ತರಬೇತಿ ನೀಡಿದ ಬಿರಾವು
Related Posts
ಪುತ್ತೂರು ಸರಕಾರಿ ಆಸ್ಪತ್ರೆ ನೌಕರರಿಗೆ ಹೆಚ್ಚುತ್ತಿದೆ ಸಾರ್ವಜನಿಕರ ಕಿರುಕುಳ! ತುರ್ತು ಸಭೆ ಕರೆದು ಪರಿಹಾರದತ್ತ ಮುಖ ಮಾಡಿದ ಆರೋಗ್ಯ ರಕ್ಷಾ ಸಮಿತಿ!
ಸಾರ್ವಜನಿಕ ಸರಕಾರಿ ಆಸ್ಪತ್ರೆ ಪುತ್ತೂರು ಇಲ್ಲಿನ ನೌಕರರಿಗೆ ಸಾರ್ವಜನಿಕರ ಬೈಗುಳ…
ಪುತ್ತೂರು ಪೇಟೆಯಲ್ಲಿ ಪೊಲೀಸ್ ಮಾರ್ಚ್ ಫಾಸ್ಟ್!
ನಾಗರಿಕರಿಗೆ ಧೈರ್ಯ ತುಂಬುವ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಪುತ್ತೂರು ಪೇಟೆಯಲ್ಲಿ…
ಪುತ್ತಿಲ ಗಡಿಪಾರು ಪ್ರಕರಣದ ವಿಚಾರಣೆ ಮುಂದೂಡಿಕೆ!
ಬಿಜೆಪಿ ಕಾರ್ಯಕರ್ತ ಅರುಣ್ ಕುಮಾರ್ ಪುತ್ತಿಲ ಅವರ ಗಡಿಪಾರು ಪ್ರಸ್ತಾವನೆಗೆ ಸಂಬಂಧಿಸಿದ…
ಮರಾಟಿ ಯುವ ವೇದಿಕೆಯಿಂದ ಸ್ಕೂಲ್ ಬ್ಯಾಗ್, ಸಮವಸ್ತ್ರ ವಿತರಣೆ
ಪುತ್ತೂರು: ಇಲ್ಲಿನ ಮರಾಟಿ ಯುವ ವೇದಿಕೆ ಭಜನಾ ತಂಡದ ವತಿಯಿಂದ ವಿದ್ಯಾಭ್ಯಾಸದ ಜೊತೆಗೆ…
ಕೊಯಿಲದಲ್ಲಿ ಪೌಲ್ಟ್ರಿ ಫಾರಂ- ಒಂದು ಸಾವಿರ ಮಂದಿಗೆ ಉದ್ಯೋಗ: ಶಾಸಕ ಅಶೋಕ್ ರೈ
ಉಪ್ಪಿನಂಗಡಿಯ ಕೊಯಿಲದಲ್ಲಿ ಪಶು ಸಂಗೋಪನಾ ಇಲಾಖಾ ವ್ಯಾಪ್ತಿಯಲ್ಲಿರುವ ಭೂಮಿಯಲ್ಲಿ ೫೦ ಎಕ್ರೆ…
ಹಂಟ್ಯಾರ್ ಅಂಗನವಾಡಿ ಸುತ್ತ ಸ್ವಚ್ಛತಾ ಕಾರ್ಯ
ಪುತ್ತೂರು: ಆರ್ಯಾಪು ಗ್ರಾಮದ ಹಂಟ್ಯಾರ್ ಅಂಗನವಾಡಿ ಆಸುಪಾಸು ಸ್ವಚ್ಛತಾ ಕಾರ್ಯ ಜೂನ್ 6ರಂದು…
ಮೂರು ದಿನ ನಡೆಯಲಿರುವ 7ನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ವಿದ್ಯುಕ್ತ ಚಾಲನೆ | ಮುಂದಿನ ವರ್ಷ ಜಿಲ್ಲಾ ಮಟ್ಟದ ಮೇಳ ನಡೆಯುವಂತಾಗಲಿ: ಈಶ್ವರ ಭಟ್ ಪಂಜಿಗುಡ್ಡೆ
ಏಳನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ದೀಪ ಬೆಳಗಿಸಿ…
ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!
ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ…
ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೇಮಕ
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮುಂದಿನ…
ಆತ್ಮಹತ್ಯಾ ಯಂತ್ರ ಆವಿಷ್ಕಾರ! ನೋವಿಲ್ಲದೇ ಸಾಯುವ ಯಂತ್ರಕ್ಕೆ ಸ್ವಿಟ್ಜರ್ಲೆಂಡ್ ಅನುಮೋದನೆ!! ಸುಲಭದಲ್ಲಿ ಸಾಯುವ ಬಗೆಯಾದರೂ ಹೇಗೆ? ಇಲ್ಲಿ ಓದಿ
ಆತ್ಮಹತ್ಯೆ ಮಾಡಿಕೊಳ್ಳುವವರಿಗೆ ಬೈಯ್ಯುವವರೇ ಹೆಚ್ಚು. ಆದರೆ ಇದೀಗ ಆತ್ಮಹತ್ಯೆಗೆ ಯಂತ್ರವನ್ನೇ…