Gl
ಸ್ಥಳೀಯ

ಫೆ. 16ರಂದು ದ್ವಾರಕೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ | ಪರಿಶ್ರಮದಿಂದ ಬೆಳೆದ ದ್ವಾರಕ, ಗೋಪಾಲಕೃಷ್ಣ ಭಟ್ ಅವರ ಕನಸಿನ ಕೂಸು: ಬೆಟ್ಟ ಈಶ್ವರ ಭಟ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ದ್ವಾರಕಾ ಪ್ರತಿಷ್ಠಾನದ ವತಿಯಿಂದ ಫೆ. 16ರಂದು ಜರಗುವ ದ್ವಾರಕೋತ್ಸವ-2025 ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಫೆ.05ರಂದು ಪುತ್ತೂರಿನ ಗೋಕುಲ ಬಡಾವಣೆಯ ನಂದಗೋಕುಲ ವೇದಿಕೆಯಲ್ಲಿ ಜರಗಿತು.

rachana_rai
Pashupathi
akshaya college
Balakrishna-gowda

ಆಮಂತ್ರಣ ಪತ್ರ ಬಿಡುಗಡೆಗೊಳಿಸಿ ಮಾತನಾಡಿದ ಹಿರಿಯ ನ್ಯಾಯವಾದಿ ಬೆಟ್ಟ ಈಶ್ವರ ಭಟ್, ದ್ವಾರಕ ಪರಿಶ್ರಮದಿಂದ ಕಟ್ಟಿದ ಸಂಸ್ಥೆ. ಇದು ಗೋಪಾಲಕೃಷ್ಣ ಭಟ್ ಅವರ ಕನಸಿನ ಕೂಸು. ಗೋಪಾಲಕೃಷ್ಣ ಭಟ್ ಅವರು ಪರಿಶ್ರಮದಿಂದ ಹಂತ ಹಂತವಾಗಿ ಕಟ್ಟಿ ಬೆಳೆಸಿದ ದ್ವಾರಕ ಸಂಸ್ಥೆ ಹಮ್ಮಿಕೊಂಡಿರುವ ದ್ವಾರಕೋತ್ಸವ ಕಾರ್ಯಕ್ರಮ ಯಶಸ್ವಿಯಾಗಲಿ ಎಂದು ಹಾರೈಸಿದರು.

pashupathi

ದ್ವಾರಕಾ ಪ್ರತಿಷ್ಠಾನದ ಸಂಚಾಲಕ ಗಣರಾಜ್ ಕುಂಬ್ಳೆ ಶುಭಹಾರೈಸಿದರು.

ವೇದಿಕೆಯಲ್ಲಿ ದ್ವಾರಕ ಕಾರ್ಪೊರೇಟ್ ಪ್ರೈ ಲಿ ವ್ಯವಸ್ಥಾಪಕ ನಿರ್ದೇಶಕರಾದ ಗೋಪಾಲಕೃಷ್ಣ ಭಟ್, ದ್ವಾರಕಾ ಪ್ರತಿಷ್ಠಾನದ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್, ದ್ವಾರಕಾ ಕಾರ್ಪೊರೇಟ್ ಪ್ರೈ ಲಿ ನಿರ್ದೇಶಕರು ಮತ್ತು ದ್ವಾರಕಾ ಪ್ರತಿಷ್ಠಾನ ಕಾರ್ಯದರ್ಶಿಗಳಾದ ಅಮೃತ ಕೃಷ್ಣ, ನಿರ್ದೇಶಕರಾದ ಅಶ್ವಿನಿ ಎನ್ ಉಪಸ್ಥಿತರಿದ್ದರು.

ದುರ್ಗಾ ಗಣೇಶ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿಗಳು ಸಹಕರಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 101