Gl jewellers
ಸ್ಥಳೀಯ

ಸುಂಕ ಗಲಾಟೆ: ರಾತ್ರೋರಾತ್ರಿ ಹೊಸ ಅಂಗಡಿ ಪ್ರತ್ಯಕ್ಷ..!!

ಮಾರುಕಟ್ಟೆ ಗುತ್ತಿಗೆದಾರನಿಗೆ ಅಧಿಕ ಸುಂಕ ನೀಡದ ಎಳನೀರು ವ್ಯಾಪಾರಿಯ ಅಂಗಡಿ ಪಕ್ಕದಲ್ಲಿ ರಾತ್ರೋರಾತ್ರಿ ಮತ್ತೊಂದು ಎಳನೀರು ಮಾರಾಟದ ಅಂಗಡಿಯನ್ನು ತೆರೆಯಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಾರುಕಟ್ಟೆ ಗುತ್ತಿಗೆದಾರನಿಗೆ ಅಧಿಕ ಸುಂಕ ನೀಡದ ಎಳನೀರು ವ್ಯಾಪಾರಿಯ ಅಂಗಡಿ ಪಕ್ಕದಲ್ಲಿ ರಾತ್ರೋರಾತ್ರಿ ಮತ್ತೊಂದು ಎಳನೀರು ಮಾರಾಟದ ಅಂಗಡಿಯನ್ನು ತೆರೆಯಲಾಗಿದೆ.

Pashupathi
Papemajalu garady
Karnapady garady

ಮೂಡಬಿದಿರೆ ಎಳನೀರು ವ್ಯಾಪಾರಿ ದಿನೇಶ್ ಅವರು ಇದುವರೆಗೆ ದಿನಕ್ಕೆ ₹ 280 ಸುಂಕವನ್ನು ಗುತ್ತಿಗೆದಾರರಿಗೆ ನೀಡುತ್ತಿದ್ದರು. ಇತ್ತೀಚೆಗೆ ಮಾರುಕಟ್ಟೆಯ ಟೆಂಡರ್ ಅನ್ನು ಹೊಸದಾಗಿ ಪಡೆದ ಗುತ್ತಿಗೆದಾರರು ₹ 400 ಸುಂಕ ನೀಡುವಂತೆ ದಿನೇಶ್ ಅವರಿಗೆ ಸೂಚಿಸಿದ್ದರು. ಅದಕ್ಕೆ ಒಪ್ಪದಿದ್ದಾಗ ಅವರ ಅಂಗಡಿಯ ಪಕ್ಕದಲ್ಲೇ ಮತ್ತೊಂದು ಅಂಗಡಿಯನ್ನು ಅನಧಿಕೃತವಾಗಿ ತೆರೆಯಲಾಗಿತ್ತು. ಈ ಬಗ್ಗೆ ದಿನೇಶ್ ಅವರು ಗುತ್ತಿಗೆದಾರನ ವಿರುದ್ಧ ಮೂಡುಬಿದಿರೆ ಪುರಸಭೆಗೆ ದೂರು ನೀಡಿದ್ದಾರೆ.

ಪುರಸಭೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅನಧಿಕೃತ ಅಂಗಡಿಯನ್ನು ಬಂದ್‌ ಮಾಡಿಸಿ ಅಲ್ಲಿದ್ದ ಎಳನೀರನ್ನು ವಶಕ್ಕೆ ಪಡೆದಿದ್ದಾರೆ. ಘಟನಾ ಸ್ಥಳಕ್ಕೆ ಮಾಜಿ ಸಚಿವ ಅಭಯಚಂದ್ರ ಜೈನ್, ಮಿಥುನ್ ರೈ ಭೇಟಿ ನೀಡಿ ಸುಂಕದ ಹೆಸರಿನಲ್ಲಿ ಮಾರುಕಟ್ಟೆ ವ್ಯಾಪಾರಿಗಳಿಗೆ ತೊಂದರೆ ನೀಡಿದರೆ ಗುತ್ತಿಗೆದಾರನ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮುಖ್ಯಾಧಿಕಾರಿಯನ್ನು ಒತ್ತಾಯಿಸಿದರು.ಕನಕಮಜಲು


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಪುತ್ತೂರು ಪೇಟೆಯಲ್ಲಿ ನಂದಿ ರಥಯಾತ್ರೆ | ದೇಶಿ ನಂದಿಗೆ ಹಾರಾರ್ಪಣೆ, ಕೃಷ್ಣನ ವಿಗ್ರಹಕ್ಕೆ ಪುಷ್ಪಾರ್ಚನೆ

ಗೋಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋಮಂದಿರ, ರಾಷ್ಟ್ರೀಯ ಗೋಸೇವಾ ಸಂಸ್ಥಾನ ಟ್ರಸ್ಟ್‌,…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ