pashupathi
ಸ್ಥಳೀಯ

3 ಫೇಸ್ ಬಿಡಿ ಸಿಂಗಲ್ ಫೇಸ್ ವಿದ್ಯುತ್ತಿಗೂ ಇಲ್ಲಿ ಸಂಕಷ್ಟ!!| ಕುಡಿಯುವ ನೀರು, ಕೃಷಿಗೆ ವಿದ್ಯುತ್ ಅಭಾವ: ‘ಕತ್ತಲೆ ಭಾಗ್ಯ’ಕ್ಕೆ ಮುನ್ನ ಎಚ್ಚೆತ್ತುಕೊಳ್ಳಿ!

tv clinic
ಒಂದೆಡೆ ವಿದ್ಯುತ್ ನೀಡದ ಇಲಾಖೆ, ಇನ್ನೊಂದೆಡೆ ಮೌನ‌ ವಹಿಸಿರುವ ಜನಪ್ರತಿನಿಧಿಗಳು. ಈ ಮೌನರಾಗದ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಭೂಗತ ಕೇಬಲ್ ಫಾಲ್ಟ್ ಕಾರಣ ನೀಡಿ ಫೆ.15 ರಿಂದ 3 ಫೇಸ್ ವಿದ್ಯುತ್ತಿಗೆ ಕತ್ತರಿ ಹಾಕಲಾಗಿದೆ. ಇದರಿಂದ ಕುಡಿಯುವ ನೀರು ಹಾಗೂ ಕೃಷಿ ಕಾಯಕಕ್ಕೆ ತೊಂದರೆ ಎದುರಾಗಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

akshaya college

ಒಂದೆಡೆ ವಿದ್ಯುತ್ ನೀಡದ ಇಲಾಖೆ, ಇನ್ನೊಂದೆಡೆ ಮೌನ‌ ವಹಿಸಿರುವ ಜನಪ್ರತಿನಿಧಿಗಳು. ಈ ಮೌನರಾಗದ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗಿದೆ.

3 ಫೇಸ್ ವಿದ್ಯುತ್ ಇಲ್ಲದೇ ಜನತೆಗೆ ಕುಡಿಯುವ ನೀರು ಪೂರೈಸಲು ಸಮಸ್ಯೆ ಉಂಟಾಗಿದೆ‌. ಜತೆಗೆ ಸಿಂಗಲ್ ಫೇಸ್ ಪಂಪ್ ಕೂಡ ವೋಲ್ವೇಜ್ ಸಮಸ್ಯೆ ಎದುರಿಸುತ್ತಿದೆ.

ಎರಡು-ಮೂರು ವರ್ಷದ ಹಿಂದೆ ಗುತ್ತಿಗಾರಿನಲ್ಲಿ ವಿದ್ಯುತ್‌ ಸಬ್ ಸ್ಟೇಶನ್ ಆರಂಭಗೊಂಡರೂ ಸಮಸ್ಯೆ ಮುಗಿಯುತ್ತಿಲ್ಲ. ವಿದ್ಯುತ್ ಸಬ್ ಸ್ಟೇಶನ್ ಉದ್ಘಾಟನೆ ವೇಳೆ ಅಧಿಕಾರಿಗಳು 7 ಫೀಡರ್ ಮಾಡುತ್ತೇವೆ ಎಂದಿದ್ದರು. ಆದರೆ ಅದನ್ನು ಜನಪ್ರತಿನಿಧಿಗಳು ಫಾಲೋ ಅಪ್ ಮಾಡಬೇಕಿತ್ತು. ಆದರೆ ಹೆಚ್ಚುವರಿ ಫೀಡರ್ ಮಾಡುವ ಕೆಲಸ ಅರ್ಧದಲ್ಲಿ ನಿಂತು ಹಲವು ವರ್ಷಗಳೇ ಕಳೆದಿವೆ. ಇದರಿಂದ ಕೂಡ ಬಳಕೆದಾರರಿಗೆ ತೊಂದರೆಯಾಗಿದೆ.

ಇದಕ್ಕೆ ಟೆಂಡ‌ರ್ ಆಗಿದ್ದರೂ ಗುತ್ತಿಗೆದಾರರು ಕ್ಲಪ್ತ ಸಮಯಕ್ಕೆ ಕಾಮಗಾರಿ ಮಾಡದ ಹಿನ್ನೆಲೆಯಲ್ಲಿ ಅವರನ್ನು ಬ್ಲ್ಯಾಕ್ ಲಿಸ್ಟ್‌ಗೆ ಸೇರಿಸಲಾಗಿತ್ತು. ರಸ್ತೆಯುದ್ದಕ್ಕೂ ವಿದ್ಯುತ್ ಕಂಬ ಹಾಕಿ ಕೆಲವೆಡೆ ವಯರ್‌ ಕೂಡ ಎಳೆಯಲಾಗಿತ್ತು. ಇದನ್ನೂ ಮುಂದುವರೆಸಲೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವಾ ಎಂದು ಸ್ಥಳೀಯರು ದೂರಿದ್ದಾರೆ.

ಬೆಳ್ಳಾರೆಯಿಂದ ಗುತ್ತಿಗಾರಿಗೆ 33 ಕೆವಿ ಲೈನ್ ಹಾದುಹೋಗುವ ಕೆಲವೆಡೆ ಭೂಗತ ಕೇಬಲ್ (UG Cable) ಅಳವಡಿಸಲಾಗಿತ್ತು. ಒಂದು ಕೇಬಲ್‌ ಜತೆಗೆ ಇನ್ನೊಂದು ಸ್ಪೇರ್ ಕೇಬಲ್ ಕೂಡ ಅಳವಡಿಸಲಾಗಿತ್ತು. ಕಳಪೆ ಗುಣಮಟ್ಟದ ಕೇಬಲ್ ಆಗಿರುವುದರಿಂದ ಒಂದು ಕೇಬಲ್ ಮೊದಲೇ ಕೈಕೊಟ್ಟಿತ್ತು. ಅದನ್ನು ಸರಿಪಡಿಸಿಕೊಳ್ಳದೇ ಇದ್ದುದರಿಂದ ಇದ್ದ ಒಂದು ಕೇಬಲ್‌ ಕೂಡ ಕೈಕೊಟ್ಟು ಕೃಷಿಕರನ್ನು ಹೈರಾಣಗುವಂತೆ ಮಾಡಿದೆ. ಇಲ್ಲಿ ಕೂಡ ಮೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯತನವೇ ಕಾರಣ. ಒಂದು ಕೈಕೊಟ್ಟಾಗ ಸರಿಪಡಿಸಿದ್ದರೇ ಈಗ ಇಂತಹ ಸಮಸ್ಯೆ ಬರುತ್ತಿರಲಿಲ್ಲ ಎನ್ನುವುದು ಸ್ಥಳೀಯರ ಅಭಿಮತ.

ಗುತ್ತಿಗಾರಿನಿಂದ ಸುಬ್ರಹ್ಮಣ್ಯಕ್ಕೆ ಭೂಗತ ಕೇಬಲ್‌ ಮುಖಾಂತರ ಎಕ್ಸ್ ಪ್ರೆಸ್ ಲೈನ್ ಮಾಡಲಾಗಿತ್ತು. ಈಗ ಇದರಲ್ಲಿ ಗುತ್ತಿಗಾರು ಸಬ್ ಸ್ಟೇಷನ್ ವಿದ್ಯುತ್ ಸರಬರಾಜು ಮಾಡುತ್ತಿದ್ದಾರೆ. ಇದರಿಂದ ಸುಬ್ರಹ್ಮಣ್ಯ ಸಬ್ ಸ್ಟೇಷನ್ ನಲ್ಲಿ ಓವ‌ರ್ ಲೋಡ್ ಸಮಸ್ಯೆ ಉಂಟಾಗಿದ್ದು, 3 ಫೇಸ್ ಬಿಡಿ ಸಿಂಗಲ್ ಫೇಸ್ ನೀಡಲು ಪರದಾಡುವಂತಾಗಿದೆ. ಸುಬ್ರಹ್ಮಣ್ಯದಿಂದ ಗುತ್ತಿಗಾರಿಗೆ ಅಳವಡಿಕೆ ಮಾಡಿದ 2 ಭೂಗತ ಕೇಬಲ್ ಗಳ ಪೈಕಿ 1 ಕೇಬಲ್ ಫಾಲ್ಟ್ ಆಗಿದ್ದು, ಇನ್ನೊಂದು ಕೈ ಕೊಟ್ಟರೇ ಗುತ್ತಿಗಾರಿಗೆ ಕತ್ತಲೇ ಭಾಗ್ಯವೇ ಗತಿ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಜು.24(ನಾಳೆ): ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ…

1 of 116