Gl jewellers
ಸ್ಥಳೀಯ

ವಿಟ್ಲ: ಅಪರೂಪದ ಶಾಸನ ಪತ್ತೆ! ಕನ್ನಡದ ವಿಚಾರ – ತುಳು ಲಿಪಿಯಲ್ಲಿ ಬರೆದಿರುವ ಶಾಸನ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದೆ

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದ ಕಸಬ ಗ್ರಾಮ ವ್ಯಾಪ್ತಿಗೆ ಸೇರುವ ಶ್ರೀಗಣಪತಿ ಲಕ್ಷ್ಮೀನಾರಾಯಣ ಉಮಾಮಹೇಶ್ವರ ದೇವರ ಮಠದ ಜೀರ್ಣೋದ್ಧಾರದ ಸಂದರ್ಭದಲ್ಲಿ ಎರಡು ಶಿಲಾಫಲಕಗಳಲ್ಲಿ ಶಾಸನಗಳು ದೊರೆತಿದ್ದು, ಇದರ ಪ್ರಾಥಮಿಕ ಮಾಹಿತಿ ಯನ್ನು ಡಾ. ವೆಂಕಟೇಶ ಮಂಜುಳಗಿರಿ ಅವರಿಂದ ಪಡೆದುಕೊಂಡ ಕುಕ್ಕೆಸುಬ್ರಹ್ಮಣ್ಯದ ಶ್ರೀನಿಕೇತನ ವಸ್ತು ಸಂಗ್ರಹಾಲಯ ಮತ್ತು ಸಂಶೋಧನ ಕೇಂದ್ರದ ನಿರ್ದೇಶಕರಾದ ಡಾ.ಜಿ.ವಿ. ಕಲ್ಲಾಪುರ ಅವರು ಈ ಅಪರೂಪದ ಶಾಸನ ಅಧ್ಯಯನ ಮಾಡಿದ್ದಾರೆ.

Papemajalu garady
Karnapady garady

ಶಾಸನವನ್ನು ಎರಡು ಕಣಶಿಲೆಯಲ್ಲಿ (ಗ್ರಾನೈಟ್) ಕೊರೆಯಲಾಗಿದ್ದು, ತುಳು ಲಿಪಿ ಮತ್ತು ಕನ್ನಡ ಭಾಷೆಯಲ್ಲಿದೆ. ಶಾಸನದ ಒಂದು ಫಲಕದಲ್ಲಿ 11 ಸಾಲುಗಳು ಮತ್ತು ಇನ್ನೊಂದು ಫಲಕದಲ್ಲಿ 4 ಸಾಲುಗಳಿವೆ.

ಸ್ವಸ್ತಿಶ್ರೀ ಎಂಬ ಶುಭ ಸೂಕ್ತದಿಂದ ಪ್ರಾರಂಭವಾಗುವ ಈ ಶಾಸನವನ್ನು ಶಾಲಿವಾಹನ ಶಕವರ್ಷ 1801ರ (ಸಾಮಾನ್ಯ ವರ್ಷ 1879) ಪ್ರಮಾಧಿ ಸಂವತ್ಸರದ ಉತ್ತರಾಯಣದ ಬಹುಳ ಬುಧವಾರದ ಕುಂಭ ಲಗ್ನದಲ್ಲಿ ಹಾಕಲಾಗಿದೆ. ಈ ಸಂದರ್ಭದಲ್ಲಿ ವಿಟ್ಲದ ಬಾಕ್ರಬೈಲಿನ ನೆತ್ರಕೆರೆಯ ಮಠದಲ್ಲಿ ಶ್ರೀಗಣಪತಿ ಲಕ್ಷ್ಮೀನಾರಾಯಣ ದೇವರನ್ನು ಪ್ರತಿಷ್ಠಾಪಿಸಿರುವುದು ಹಾಗೆಯೆ ಪ್ರತಿಷ್ಠಿತ ದೇವರ ನಿತ್ಯ ಸೇವೆಯ ವಿನಿಯೋಗಕ್ಕಾಗಿ ನಗದು ಸಹಿತ ದಾನವನ್ನು ಕುಕ್ಕಿಲದ ಪುಟ್ಟಣ ಭಟ್ಟರ ಮಗ ಈಶ್ವರ ಭಟ್ಟರು ನೀಡಿರುವುದು ಶಾಸನದಿಂದ ತಿಳಿದುಬರುತ್ತದೆ.

ಈ ಕ್ಷೇತ್ರ ಕಾರ್ಯ ಶೋಧನೆಯಲ್ಲಿ ಕುಕ್ಕೆಸುಬ್ರಹ್ಮಣ್ಯ ಶ್ರೀನಿಕೇತನ ವಸ್ತುಸಂಗ್ರಹಾಲಯ ಮತ್ತು ಸಂಶೋಧನಾ ಕೇಂದ್ರದ ಉಪನಿರ್ದೇಶಕ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಇತಿಹಾಸ ಮತ್ತು ಪುರಾತತ್ತ ಸಂಶೋಧನಾರ್ಥಿ ಮಂಜುನಾಥ ನಂದಳಿಕೆ ಹಾಗೂ ದೇವಾಲಯದ ಆಡಳಿತ ಮಂಡಳಿಯ ಎನ್. ಶಂಕರನಾರಾಯಣ ಭಟ್ಟ, ಡಾ.ಎನ್. ತಿರುಮಲೇಶ್ವರ ಭಟ್ಟ, ಎನ್. ರವೀಶ, ಎನ್. ಮಹೇಶ, ಗಣೇಶ ಭಟ್, ಸುರೇಶ್ ಎನ್., ಶರ್ಮಿಳಾ, ಯು.ನಾರಾಯಣ ಭಟ್, ಮಂಜುಳಗಿರಿ ಈಶ್ವರ ಭಟ್ ಸಹಕರಿಸಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ! ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ