Gl
ಸ್ಥಳೀಯ

ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ಮುಕ್ತ? ಸುಳಿವು ನೀಡಿದ ಅಧಿಕಾರಿಗಳು

ಅಡ್ಡಹೊಳೆ- ಬಿ.ಸಿ.ರೋಡ್ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿಯ ಪ್ರಮುಖ ಭಾಗಗಳಾದ ಕಲ್ಲಡ್ಕ ಪ್ಲೈಓವ‌ರ್, ಮಾಣಿ ಓವರ್‌ಪಾಸ್, ಮೆಲ್ಕಾರ್ ಓವರ್‌ಪಾಸ್‌, ಪುತ್ತೂರು ಕ್ರಾಸ್ ಓವರ್ ಇತ್ಯಾದಿ ಬಹುತೇಕ ಪೂರ್ಣವಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ಅಡ್ಡಹೊಳೆ- ಬಿ.ಸಿ.ರೋಡ್ ನಡುವಿನ ಚತುಷ್ಪಥ ಹೆದ್ದಾರಿ ಕಾಮಗಾರಿಯ ಪ್ರಮುಖ ಭಾಗಗಳಾದ ಕಲ್ಲಡ್ಕ ಪ್ಲೈಓವ‌ರ್, ಮಾಣಿ ಓವರ್‌ಪಾಸ್, ಮೆಲ್ಕಾರ್ ಓವರ್‌ಪಾಸ್‌, ಪುತ್ತೂರು ಕ್ರಾಸ್ ಓವರ್ ಇತ್ಯಾದಿ ಬಹುತೇಕ ಪೂರ್ಣವಾಗುತ್ತಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ.

rachana_rai
Pashupathi
akshaya college

ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಶನಿವಾರ ಸಂಸದ ಕ್ಯಾ। ಬ್ರಿಜೇಶ್ ಚೌಟರ ಅಧ್ಯಕ್ಷತೆ ಯಲ್ಲಿ ಜರಗಿದ ದ.ಕ. ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ) ಸಭೆಯಲ್ಲಿ ಎನ್‌ಎಚ್‌ಎಐ ಯೋಜನಾ ನಿರ್ದೇಶಕ ಅಬ್ದುಲ್ಲ ಜಾವೇದ್ ಅಜ್ಜಿ ವಿವರಣೆ ನೀಡಿ, ಪ್ರಸ್ತುತ ಕಲ್ಲಡ್ಕ ಪ್ಲೈಓವರ್, ಕೂಡು ರಸ್ತೆಗಳು ಹಾಗೂ ಅಂತಿಮ ಹಂತದ ಕೆಲಸ ನಡೆಯುತ್ತಿದೆ, ಎಪ್ರಿಲ್ ತಿಂಗಳಲ್ಲೇ ಸಂಚಾರಕ್ಕೆ ಮುಕ್ತಗೊಳ್ಳುವ ನಿರೀಕ್ಷೆ ಇದೆ ಎಂದು ಹೇಳಿದರು.

pashupathi

ಕೆತ್ತಿಕಲ್‌ನಲ್ಲಿ ಗುಡ್ಡ ಜರಿಯುವುದಕ್ಕೆ ಪರ್ಯಾಯ ವಾಗಿ 10 ದಿನಗಳೊಳಗೆ ಕೆಲಸ ಆರಂಭಿಸುವಂತೆ ಫೆ.22ರಂದು ಬೆಂಗಳೂರಿನಲ್ಲಿ ನಡೆದ ಸಭೆಯಲ್ಲೇ ಸೂಚಿಸಲಾಗಿದ್ದರೂ ಇದುವರೆಗೆ ಕೆಲಸ ಆರಂಭಿಸಿಲ್ಲ ಎಂದು ಜಿಲ್ಲಾಧಿಕಾರಿ ಗಮನ ಸೆಳೆದರು. ಪರ್ಯಾಯವಾಗಿ ಏನು ಮಾಡಬಹುದು ಎನ್ನುವ ಬಗ್ಗೆ ತಜ್ಞರ ವರದಿ ಇನ್ನೂ ಬಂದಿಲ್ಲ ಎಂದು ಎನ್‌ಎಚ್‌ಎಐಯ ಅಬ್ದುಲ್ಲ ತಿಳಿಸಿದಾಗ ವರದಿ ಬರುವ ವರೆಗೆ ಕಾದರೆ ಮಳೆಗಾಲ ಬಂದು ಸಮಸ್ಯೆಯಾಗಬಹುದು, ಪರ್ಯಾಯವಾಗಿ ವೈರ್‌ಮೆಷ್ ಹಾಕುವ ಗೇಬಿಯನ್ ವಾಲ್ ಮಾಡಬಹುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಬಿಕರ್ನಕಟ್ಟೆ-ಸಾಣೂರು ಹೆದ್ದಾರಿ ಕಾಮಗಾರಿ ಯಲ್ಲಿ ಸುಮಾರು 39 ಕಿ.ಮೀ.ನಷ್ಟು ಭಾಗ ಕಾಮಗಾರಿಗೆ ಲಭ್ಯವಾಗಿದೆ. ಅದರಲ್ಲಿ 25 ಕಿ.ಮೀ.ನಷ್ಟು ಹೆದ್ದಾರಿ ಕಾರ್ಯ ಪೂರ್ಣಗೊಂಡಿದೆ ಎಂದು ತಿಳಿಸಿದರು. ಮೂಲ್ಕಿಯಿಂದ ತಲಪಾಡಿವರೆಗಿನ ಎನ್‌ಎಚ್ 66ರ 4 ಕಡೆ ಸರ್ವಿಸ್ ರಸ್ತೆ ಕಾಮಗಾರಿ ಮಳೆಗಾಲದ ಬಳಿಕ ಆರಂಭಗೊಳ್ಳುವುದಾಗಿ ಅಧಿಕಾರಿಗಳು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಭಾಗೀರಥಿ, ವೇದವ್ಯಾಸ ಕಾಮತ್, ವಿಧಾನ ಪರಿಷತ್‌ ಸದಸ್ಯ ಕಿಶೋ‌ರ್ ಕುಮಾರ್, ಜಿ.ಪಂ ಸಿಇಒ ಡಾ. ಆನಂದ್‌, ಜಿಲ್ಲಾ ಅರಣ್ಯ ಉಪ ಸಂರಕ್ಷಣಾಧಿಕಾರಿ ಆಂಟನಿ ಮರಿಯಪ್ಪ, ಡಿಸಿಪಿ ಸಿದ್ಧಾರ್ಥ್ ಗೋಯಲ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100