tamanvi
ಟ್ರೆಂಡಿಂಗ್ ನ್ಯೂಸ್

ಫೆ. 1: ನೆಲ್ಲಿಕಟ್ಟೆ ಮಿತ್ರ ಮಂಡಲದ ಸುವರ್ಣ ಸಂಭ್ರಮ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆ ಮಿತ್ರ ಮಂಡಲದ 50 ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸುವರ್ಣ ಸಂಭ್ರಮ ಫೆ.1 ರಂದು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಸಮೀಪ ನಡೆಯಲಿದೆ ಎಂದು ಸಂಚಾಲಕ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ ಹೇಳಿದರು.

maithri
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನೆಲ್ಲಿಕಟ್ಟೆಯ ಕೆಲವು ವಿದ್ಯಾರ್ಥಿಗಳು,ಯುವಕರು ಹಾಗೂ ಸುತ್ತಲಿನ ಗೆಳೆಯರು ಸೇರಿ ಪೂರಕವಾದ ಬೈಲಾ ತಯಾರಿಸಿಕೊಂಡು ನೆಲ್ಲಿಕಟ್ಟೆ ಮಿತ್ರ ಮಂಡಲ ಎಂಬ ಹೆಸರಿನಲ್ಲಿ ಪ್ರಾರಂಭಿಸಿದ ಸಂಸ್ಥೆ ಇದಾಗಿದೆ. ಆ ಕಾಲದಲ್ಲಿ ಅಡ್ಡಕಂಬದ ಮೇಲೆ ನಡೆಯುವ ಮೊಸರು ಕುಡಿಕೆ ಸ್ಪರ್ಧೆ, ಅಂತರ್ ಜಿಲ್ಲಾ ಮಟ್ಟದ ಕಬಡ್ಡಿ,ವಾಲಿಬಾಲ್,ಶಟಲ್ ಬ್ಯಾಡ್ಮಿಂಟನ್ ಟೆನ್ನಿಸ್ ಟೂರ್ನಮೆಂಟ್ ಗಳನ್ನು ಆಯೋಜಿಸಿದ್ದು. ರಾಜ್ಯದಲ್ಲಿಯೇ ಪ್ರಪ್ರಥಮವಾಗಿ ರಿಲಯನ್ಸ್ ಮಾದರಿಯಲ್ಲಿ ನಿಗದಿತ 10 ಓವರುಗಳ ಕ್ರಿಕೆಟ್ ಪಂದ್ಯಾಟ ಆಯೋಜಿಸಿದ ಕೀರ್ತಿ ಈ ಸಂಸ್ಥೆಯದ್ದು ಎಂದರು.
ಸ್ವಚ್ಛತಾ ಕಾರ್ಯಕ್ರಮ, ಕಾಲು ದಾರಿ ನಿರ್ಮಾಣ ಹೀಗೆ ಹತ್ತಾರು ಸಮಾಜಮುಖಿ ಕಾರ್ಯಕ್ರಮ ಅನುಷ್ಠಾನಿಸಿದ್ದ ಕೀರ್ತಿ ಈ ಮಿತ್ರ ಮಂಡಲಕ್ಕೆ ಸೇರಿದೆ. ಜ. 1 ರಂದು ಬೆಳಗ್ಗೆ ಆರೋಗ್ಯ ತಪಾಸಣ ಶಿಬಿರವನ್ನು ಬ್ರಹ್ಮಶ್ರೀ ಕೆಮ್ಮಿಂಜೆ ಲಕ್ಷ್ಮೀಶ ತಂತ್ರಿ ಅವರು ಉದ್ಘಾಟಿಸಲಿದ್ದಾರೆ. ಅನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಸಂಜೆ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಲಿಕಟ್ಟೆ ಮಿತ್ರಮಂಡಲದ ಗೌರವಾಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಸಂಸದ ಬ್ರಿಜೇಶ್ ಚೌಟ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಜೀವ ರಕ್ಷಕ ಈಶ್ವರ ಮಲ್ಪೆ, ವೈದ್ಯ ಡಾ|ಅಜಯ್ ಅವರಿಗೆ ಸಮ್ಮಾನ ಕಾರ್ಯಕ್ರಮ ನೆರವೇರಲಿದೆ. ಹಲವು ಸಾಧಕರಿಗೆ ಗೌರವಾರ್ಪಣೆ ನಡೆಯಲಿದೆ. ರಾತ್ರಿ ಸಂಗೀತ ರಸಮಂಜರಿ ಪ್ರದರ್ಶನಗೊಳ್ಳಲಿದೆ.
ಪತ್ರಿಕಾಗೋಷ್ಟಿಯಲ್ಲಿ ನೆಲ್ಲಿಕಟ್ಟೆ ಮಿತ್ರ ಮಂಡಲ ಅಧ್ಯಕ್ಷ ಹರಿಪ್ರಸಾದ್ ಶೆಟ್ಟಿ ನೆಲ್ಲಿಕಟ್ಟೆ, ಉಪಾಧ್ಯಕ್ಷ ನಿತ್ಯಾನಂದ ಶೆಟ್ಟಿ ನೆಲ್ಲಿಕಟ್ಟೆ, ಸಂದೀಪ್ ನೆಲ್ಲಿಕಟ್ಟೆ, ಕೋಶಾಧಿಕಾರಿ ಜಗನ್ನಾಥ ಜೋಗಿ ನೆಲ್ಲಿಕಟ್ಟೆ ಉಪಸ್ಥಿತರಿದ್ದರು.

ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಆಟಮ್’ಬರ್ಗ್ ಫ್ಯಾನ್ ಮಾರಾಟದಲ್ಲಿ ದಾಖಲೆ: ಮೈತ್ರಿ ಎಲೆಕ್ಟ್ರಿಕ್ ಕಂಪೆನಿಗೆ ಗೋಲ್ಡ್ ಮೆಂಬರ್’ಶಿಪ್

ಪುತ್ತೂರು: ಆಟಮ್’ಬರ್ಗ್ ಫ್ಯಾನ್ ಗಳಲ್ಲಿ ಅತ್ಯಧಿಕ ಮಾರಾಟ ಮಾಡಿ ಸಾಧನೆ ಮಾಡಿದ ಪುತ್ತೂರಿನ…