ಪುತ್ತೂರು: ಆಭರಣ ಕ್ಷೇತ್ರದಲ್ಲಿ ದಶಕಗಳ ನಂಬಿಕೆ ಮತ್ತು ಸಂಪ್ರದಾಯವನ್ನು ಉಳಿಸಿಕೊಂಡು ಬಂದಿರುವ ಖ್ಯಾತ ಸಂಸ್ಥೆ ‘ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’, ಅಕ್ಷಯ ತೃತೀಯದ ಅಂಗವಾಗಿ ವಿಶೇಷ ರಿಯಾಯಿತಿ ಕೊಡುಗೆಗಳನ್ನು ಘೋಷಿಸಿದ್ದು, ಗ್ರಾಹಕರಿಂದ ಅಭೂತಪೂರ್ವ ಸ್ಪಂದನೆ ವ್ಯಕ್ತವಾಗುತ್ತಿದೆ.
ಅಕ್ಷಯ ತೃತೀಯದ ಶುಭ ಮುಹೂರ್ತದಲ್ಲಿ ಚಿನ್ನಾಭರಣ ಖರೀದಿಸುವುದು ಐಶ್ವರ್ಯ ಮತ್ತು ಸಮೃದ್ಧಿಯ ಸಂಕೇತ ಎಂಬ ನಂಬಿಕೆ ಜನರಲ್ಲಿದೆ. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಪುತ್ತೂರು, ಮೂಡುಬಿದಿರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿರುವ ಎಲ್ಲಾ ಮಳಿಗೆಗಳಲ್ಲಿ ಅಕ್ಷಯ ತೃತೀಯದ ಸಡಗರ ಮನೆಮಾಡಿದೆ. ಅನೇಕ ಗ್ರಾಹಕರು ಅತಿ ಉತ್ಸಾಹದಿಂದ ತಮಗಿಷ್ಟವಾದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಖರೀದಿಸುತ್ತಿರುವುದು ಕಂಡುಬಂದಿದೆ.
ಗ್ರಾಹಕರ ಅನುಕೂಲಕ್ಕಾಗಿ ಈ ವಿಶೇಷ ರಿಯಾಯಿತಿ ಕೊಡುಗೆಗಳು ಏಪ್ರಿಲ್ 20ರವರೆಗೆ ಲಭ್ಯ ಇತ್ತು. ಗುಣಮಟ್ಟದ ಆಭರಣಗಳನ್ನು ಆಕರ್ಷಕ ರಿಯಾಯಿತಿ ದರದಲ್ಲಿ ಖರೀದಿಸಲು ಇದು ಉತ್ತಮ ಅವಕಾಶವಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಇದರ ಪ್ರಯೋಜನ ಪಡೆದುಕೊಂಡಿದ್ದಾರೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.























