ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ ಅಮೈ ಅವರು ಆಯ್ಕೆಯಾಗಿದ್ದಾರೆ.
ನಾಡಪ್ರಭು ಕೆಂಪೇಗೌಡ ಪ್ರತಿಷ್ಠಾನವು ಜೂನ್ 27ರಂದು ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಿದೆ.
ತಮ್ಮ ಅಂಗವೈಕಲ್ಯವನ್ನು ಮೆಟ್ಟಿನಿಂತು ಎಸ್.ಆರ್.ಕೆ. ಲ್ಯಾಡರ್ಸ್ ಸಂಸ್ಥೆಯನ್ನು ಕಟ್ಟಿ ಬೆಳೆಸಿರುವ ಕೇಶವ ಅಮೈ ಅವರು, ಕೃಷಿ ಯಂತ್ರೋಪಕರಣಗಳ ಹೊಸ ಆವಿಷ್ಕಾರಗಳ ಮೂಲಕ ಉದ್ಯಮದ ಜೊತೆಗೆ ಕೃಷಿ ಕ್ಷೇತ್ರಕ್ಕೆ ಹೊಸತನ ನೀಡುವಲ್ಲಿಯೂ ಹೆಸರು ಮಾಡಿದ್ದಾರೆ. ಈ ಕೃಷಿ ಯಂತ್ರೋಪಕರಣಗಳು ರೈತರಿಗೆ ಸಹಕಾರಿಯಾಗಿದ್ದು, ಸಂಶೋಧನಾತ್ಮಕ ಕೃಷಿ ಸಂಬಂಧಿತ ಯಂತ್ರೋಪಕರಣಗಳ ಮಹತ್ವದ ಕೊಡುಗೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಅವರನ್ನು ಆಯ್ಕೆ ಮಾಡಲಾಗಿದೆ.
ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದ ಕೇಶವ ಅಮೈ ಅವರನ್ನು ಪ್ರತಿಷ್ಠಾನದ ಪ್ರಮುಖರು ಭೇಟಿ ಮಾಡಿ ಅಭಿನಂದಿಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಯತೀಶ್ ಆರ್ವಾರ, ಬೆಳ್ಳಾರೆ ಸಿಎ ಬ್ಯಾಂಕ್ ಅಧ್ಯಕ್ಷ ಆರ್.ಕೆ. ಭಟ್ ಕುರುಂಬುಡೇಲು, ಸುಳ್ಯ ಎಲ್ ಡಿ ಬ್ಯಾಂಕ್ ಉಪಾಧ್ಯಕ್ಷ ಅವಿನಾಶ್ ಕುರುಂಜಿ, ಬಿಜೆಪಿ ಬೆಳ್ಳಾರೆ ಶಕ್ತಿ ಕೇಂದ್ರದ ಅನೂಪ್ ಬಿಳಿಮಲೆ, ದಿನೇಶ್ ಪಂಜಿಗ, ಕೇಶವ ಅಮೈ ಅವರ ತಾಯಿ ರಾಮಕ್ಕ, ಪತ್ನಿ ಮಾಲತಿ, ಪುತ್ರ ಗಗನ್ ಉಪಸ್ಥಿತರಿದ್ದರು.





















