ಪುತ್ತೂರು: ಆರ್ಯಭಟ ಎಜುಕೇಶನಲ್ ಟ್ರಸ್ಟ್ ಸಹಯೋಗದಲ್ಲಿ ಧಾರವಾಡ ಚೇತನ ಪ್ರತಿಷ್ಠಾನ ನೀಡುವ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿಯನ್ನು ನೆಹರುನಗರದ ರೋಹಿಣಿ ಆಚಾರ್ಯ ಅವರಿಗೆ ಪ್ರದಾನ ಮಾಡಲಾಯಿತು.

ಬೆಂಗಳೂರಿನಲ್ಲಿ ನಡೆದ 2026ರ ಅಖಿಲ ಕರ್ನಾಟಕ ಶಿಕ್ಷಕರ ಸಮ್ಮೇಳನದಲ್ಲಿ ನಡೆದ ಶೈಕ್ಷಣಿಕ ಗೋಷ್ಠಿ, ಚರ್ಚೆ – ಸಂವಾದದ ಸಮಾರಂಭದಲ್ಲಿ ಶಿಕ್ಷಣ ಸೇರಿದಂತೆ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವ ಸಮರ್ಪಣೆ ಹಾಗೂ ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.





















