tamanvi
ಟ್ರೆಂಡಿಂಗ್ ನ್ಯೂಸ್

ಆರ್ಯಾಪು ಸಹಕಾರ ಸಂಘದಲ್ಲಿ ಎಸ್.ಐ.ಆರ್. ಮಾಹಿತಿ ಕಾರ್ಯಾಗಾರ | ಇನ್ನು ಸರಕಾರಿ ಸೌಲಭ್ಯಕ್ಕೆ ಮತದಾರರ ಪಟ್ಟಿಯಲ್ಲಿ ಹೆಸರಿರುವುದು ಅಗತ್ಯ: ಮಹಮ್ಮದಾಲಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಎಸ್.ಐ.ಆರ್ ಮಾಹಿತಿ ಕಾರ್ಯಾಗಾರ ಸೋಮವಾರ ಬೆಳಿಗ್ಗೆ ಆರ್ಯಾಪು ಕೃಷಿ ಪತ್ತಿನ ಸಹಕಾರ ಸಂಘದ ಸಭಾಂಗಣದಲ್ಲಿ ನಡೆಯಿತು.

ಸಹಕಾರ ಸಂಘದ ಅಧ್ಯಕ್ಷ ಮಹಮ್ಮದಾಲಿ ಮಾತನಾಡಿ, ಹೊಸದಾಗಿ ಮತ ಪಟ್ಟಿ ತಯಾರಿಕೆ. ಇದು ಪರಿಷ್ಕರಣೆ ಅಲ್ಲ. ಈಗ ಅರ್ಜಿ‌ ಪಡೆದುಕೊಂಡು, ಮತದಾರರ ಪಟ್ಟಿಗೆ ಸೇರಿಸುವ ಕೆಲಸ ನಡೆಯುತ್ತಿದೆ. ಇನ್ನು ಮುಂದೆ ಯಾವುದೇ ಸರಕಾರದ ಸೌಲಭ್ಯ ಪಡೆದುಕೊಳ್ಳಲು ಮತದಾರರ ಪಟ್ಟಿ ಅಗತ್ಯ. ಅದಕ್ಕಾಗಿ ಎಸ್.ಐ.ಆರ್. ಮಾಡಿಕೊಳ್ಳಲೇಬೇಕು ಎಂದರು.

ತರಾತುರಿಯಲ್ಲಿ, ಗೊಂದಲ ಮೂಡಿಸುವ ರೀತಿಯಲ್ಲಿ ಈ ಮತದಾರರ ಪಟ್ಟಿ ತಯಾರಿಸಲಾಗುತ್ತಿದೆ. ಹಾಗಾಗಿ ಇದರ ಬಗ್ಗೆ ನಮ್ಮ ಗ್ರಾಮಸ್ಥರಿಗೆ ಮಾಹಿತಿ ನೀಡಬೇಕು ಎಂದು ತೀರ್ಮಾನಿಸಿದೆವು. ಕುರಿಯ ಗ್ರಾಮದ ನಮ್ಮ ಶಾಖೆಯಲ್ಲೂ ತರಬೇತಿ ಪಡೆದ ನಮ್ಮ ಸಿಬ್ಬಂದಿಗಳು ಅಲ್ಲಿಗೆ ಬರುತ್ತಾರೆ ಎಂದರು.

ಸಂಪನ್ಮೂಲ ವ್ಯಕ್ತಿ ಅಮಿತ ಅಶ್ವಿನ್ ಉಳ್ಳಾಲ್, ಸಹಕಾರ ಸಂಘದ ಉಪಾಧ್ಯಕ್ಷ ಸುರೇಂದ್ರ ರೈ ಬಳ್ಳಮಜಲು, ನಿರ್ದೇಶಕರಾದ ಗಣೇಶ್ ರೈ, ಸದಾನಂದ ಶೆಟ್ಟಿ ಕೂರೇಲು, ಇಸ್ಮಾಯಿಲ್, ಗಣೇಶ್ ರೈ ಕುರಿಯ, ಸಂಶುದ್ದೀನ್, ತೆರೇಸಾ ಎಂ. ಸಿಕ್ವೇರಾ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಜಿತ್ ಕುಮಾರ್ ರೈ ಎನ್.ಎಸ್., ಸಿಬ್ಬಂದಿಗಳಾದ ಸುಭಾಷಿಣಿ ವಿ. ರೈ, ಉಮೇಶ್ ಎಸ್.ಕೆ., ಅರ್ಜುನ್ ಭಾಸ್ಕರ್, ವಿನಯ್ ಕುಮಾರ್ ರೈ, ಪ್ರಶಾಂತಿ ಎಂ. ಉಪಸ್ಥಿತರಿದ್ದರು.

ನವೋದಯ ಸಂಘದ ಪ್ರೇರಕಿ ಮೋಹಿನಿ ಸಹಕರಿಸಿದರು. ಉಮೇಶ್ ಎಸ್.ಕೆ. ಕಾರ್ಯಕ್ರಮ ನಿರೂಪಿಸಿದರು.

ಸಾಂಕೇತಿಕ ಉದ್ಘಾಟನೆಯ ಬಳಿಕ ಮಾಹಿತಿ ಕಾರ್ಯಾಗಾರ ನಡೆಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಜೆಸಿಐ ಪುತ್ತೂರು ನಿಯೋ ಪ್ರೈಮ್ ಅಸ್ತಿತ್ವಕ್ಕೆ | ನಾಳೆ (ಆ. 14) ಸಂಜೆ ಉದ್ಘಾಟನೆ, ಪದಸ್ವೀಕಾರ ಸಮಾರಂಭ

ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದಲ್ಲಿ ಜೆಸಿಐ ಪುತ್ತೂರು ನಿಯೋ ಪ್ರೈಮ್ ಉದ್ಘಾಟನೆ…

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…