tamanvi
ಟ್ರೆಂಡಿಂಗ್ ನ್ಯೂಸ್

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನಲ್ಲಿ ಸ್ವಾತಂತ್ರ್ಯೋತ್ಸವ, ವರಮಹಾಲಕ್ಷ್ಮೀ ಹಬ್ಬದ ವಿಶೇಷ ಕೊಡುಗೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸ್ವಾತಂತ್ರ್ಯೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನಗರದ ಪ್ರತಿಷ್ಠಿತ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ವಿಶೇಷ ಮಾರಾಟ ಮೇಳ ಆಯೋಜಿಸಲಾಗಿದೆ. ಆಗಸ್ಟ್ 15ರಿಂದ 23ರವರೆಗೆ ನಡೆಯಲಿರುವ ಈ ವಿಶೇಷ ಆಫರ್‌ನಲ್ಲಿ ಚಿನ್ನ, ಬೆಳ್ಳಿ ಹಾಗೂ ವಜ್ರಾಭರಣಗಳ ಖರೀದಿಗೆ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ.

1957ರಿಂದ ಗುಣಮಟ್ಟ, ವಿಶ್ವಾಸ ಹಾಗೂ ವಿನೂತನ ವಿನ್ಯಾಸಗಳ ಮೂಲಕ ಗ್ರಾಹಕರ ಮೆಚ್ಚುಗೆಗೆ ಪಾತ್ರವಾಗಿರುವ ಸಂಸ್ಥೆ, ಹಬ್ಬದ ಸಂಭ್ರಮವನ್ನು ಮತ್ತಷ್ಟು ವಿಶೇಷಗೊಳಿಸಲು ವಿವಿಧ ಕೊಡುಗೆಗಳನ್ನು ಪರಿಚಯಿಸಿದೆ.

maithri

ಚಿನ್ನಾಭರಣಗಳ VA ಮೇಲೆ ಪ್ರತೀ ಗ್ರಾಂಗೆ ರೂ.600ರವರೆಗೆ ರಿಯಾಯಿತಿ, ವಜ್ರಾಭರಣಗಳ ಮೇಲೆ ಪ್ರತೀ ಕ್ಯಾರೆಟ್‌ಗೆ ಫ್ಲಾಟ್ ರೂ.7,000 ರಿಯಾಯಿತಿ ಹಾಗೂ ಬೆಳ್ಳಿ ಆಭರಣಗಳ ಮೇಲೆ ಪ್ರತೀ ಕೆ.ಜಿಗೆ ಫ್ಲಾಟ್ ರೂ.8,000 ರಿಯಾಯಿತಿ ಲಭ್ಯವಿದೆ.

ಇದರ ಜೊತೆಗೆ ಹಳೆಯ ಚಿನ್ನಾಭರಣಗಳನ್ನು ವಿನಿಮಯ ಮಾಡಿಕೊಳ್ಳುವ ಗ್ರಾಹಕರಿಗೆ ಎಕ್ಸ್‌ಚೇಂಜ್ ದರದ ಮೇಲೆ 0% ಕಡಿತದ ಸೌಲಭ್ಯ ನೀಡಲಾಗುತ್ತಿದೆ. ಹಳದಿ ಟ್ಯಾಗ್ ಸಂಗ್ರಹದಲ್ಲಿ 10%ರಿಂದ ಪ್ರಾರಂಭವಾಗುವ ವಿಶೇಷ ರಿಯಾಯಿತಿ ಕೂಡ ಲಭ್ಯವಿದ್ದು, ನೆಕ್ಲೆಸ್, ಹಾರ, ಚೈನ್, ಉಂಗುರ, ಬಳೆ ಸೇರಿದಂತೆ ವಿವಿಧ ವಿನ್ಯಾಸಗಳ ಆಭರಣಗಳ ವಿಶಾಲ ಸಂಗ್ರಹ ಗ್ರಾಹಕರಿಗಾಗಿ ಸಿದ್ಧವಾಗಿದೆ.

ಈ ವಿಶೇಷ ಕೊಡುಗೆಗಳು ಪುತ್ತೂರು, ಸುಳ್ಯ, ಹಾಸನ, ಕುಶಾಲನಗರ ಹಾಗೂ ಮೂಡಬಿದ್ರೆಯಲ್ಲಿರುವ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್‌ನ ಎಲ್ಲಾ ಮಳಿಗೆಗಳಲ್ಲಿ ಲಭ್ಯವಿವೆ.

ಸ್ವಾತಂತ್ರ್ಯೋತ್ಸವ ಹಾಗೂ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ನೀಡಲಾಗುತ್ತಿರುವ ಈ ವಿಶೇಷ ಕೊಡುಗೆಗಳ ಸದುಪಯೋಗ ಪಡೆದುಕೊಳ್ಳುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ತಂಬಾಕು-ನಿಕೋಟಿನ್ ಉತ್ಪನ್ನಗಳ ನಿಷೇಧ: ಅಡಿಕೆ ಬೆಳೆಗಾರರಿಗೆ ತೊಂದರೆಯಾಗದಂತೆ ಕ್ರಮಕ್ಕೆ ಕ್ಯಾಂಪ್ಕೊ ಆಗ್ರಹ

ಮಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ಮಾರಾಟ ಹಾಗೂ…

ಜೆಸಿಐ ಪುತ್ತೂರು ನಿಯೋ ಪ್ರೈಮ್ ಅಸ್ತಿತ್ವಕ್ಕೆ | ನಾಳೆ (ಆ. 14) ಸಂಜೆ ಉದ್ಘಾಟನೆ, ಪದಸ್ವೀಕಾರ ಸಮಾರಂಭ

ಪುತ್ತೂರು: ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದಲ್ಲಿ ಜೆಸಿಐ ಪುತ್ತೂರು ನಿಯೋ ಪ್ರೈಮ್ ಉದ್ಘಾಟನೆ…